ಗೋಣಿಕೊಪ್ಪಲು, ಮಾ. 14: ಪೊನ್ನಂಪೇಟೆಯ ಹೋಬಳಿಯ 39 ನಿವಾಸಿಗಳಿಗೆ ಮತ್ತು ಹುದಿಕೇರಿ ಹೋಬಳಿಯ 27 ನಿವಾಸಿಗಳಿಗೆ ನಿವೇಶನದ ಹಕ್ಕು ಪತ್ರವನ್ನು ವಿತರಿಸಲಾಯಿತು.ಜಿಲ್ಲಾ ಪಂಚಾಯಿತಿ ಸದಸ್ಯರುಗಳಾದ ಸಿ.ಕೆ. ಬೋಪಣ್ಣ, ಶ್ರೀಜಾ ಸಾಜಿ, ಅಪ್ಪಡೇರಂಡ ಭವ್ಯ, ಶಶಿ ಸುಬ್ರಮಣಿ, ಅಚ್ಚಪಂಡ ಮಹೇಶ್, ತಾಲೂಕು ಪಂಚಾಯಿತಿ ಅಧ್ಯಕ್ಷೆ ಸ್ಮಿತಾ ಪ್ರಕಾಶ್ ತಾಲೂಕು ಪಂಚಾಯಿತಿ ಉಪಾಧ್ಯಕ್ಷ ನೆಲ್ಲಿರ ಚಲನ್ ಕುಮಾರ್, ಸದಸ್ಯರುಗಳಾದ ಆಶಾ ಪೂಣಚ್ಚ, ಜಯಾ ಪೂವಯ್ಯ, ಕಾರ್ಯ ನಿರ್ವಹಣಾಧಿಕಾರಿ ಕಿರಣ್ ಪಡ್ನೇಕರ್, ತಹಶೀಲ್ದಾರ್ ಮಹದೇವಸ್ವಾಮಿ ಗೋಣಿಕೊಪ್ಪಲು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸೆಲ್ವಿ, ಸದಸ್ಯರುಗಳಾದ ರತಿ ಅಚ್ಚಪ್ಪ, ಸುರೇಶ್ ರೈ ಹಾಜರಿದ್ದರು.