ಮಡಿಕೇರಿ, ಮಾ. 15: ನಗರದ ಚೈನ್‍ಗೇಟ್ ಹಾಗೂ ಮಲ್ಲಿಕಾರ್ಜುನ ನಗರದ ಹಿಂದೂ ರುದ್ರಭೂಮಿಯಲ್ಲಿ ಮಡಿಕೇರಿಯ ಹಿಂದೂ ಮಲಯಾಳಿ ಸಂಘದಿಂದ ಶ್ರಮದಾನದ ಮೂಲಕ ಸ್ವಚ್ಛಗೊಳಿಸಲಾಯಿತು.

ರುದ್ರಭೂಮಿಯಲ್ಲಿ ಹಲವು ವರ್ಷಗಳಿಂದ ಬೆಳೆದಿದ್ದ ಕಾಡು ಗಿಡ- ಗಂಟಿಗಳನ್ನು ಕಡಿದು ಸ್ವಚ್ಛಗೊಳಿಸಲಾಯಿತು. ಈ ಸಂದರ್ಭ ಹಿಂದೂ ಮಲೆಯಾಳಿ ಸಮಾಜದ ತಾಲೂಕು ಅಧ್ಯಕ್ಷ ಕೆ.ಎಸ್. ರಮೇಶ್, ಉಪಾಧ್ಯಕ್ಷ ಭರತ್, ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರ, ಖಜಾಂಚಿ ಉತ್ತಮ್, ನಿರ್ದೇಶಕರಾದ ಪ್ರಮೋದ್, ಅಪ್ಪುಕುಟ್ಟ ರವಿ, ಸುಬ್ರಮಣಿ ಸೇರಿದಂತೆ ಸುಮಾರು 60ಕ್ಕೂ ಅಧಿಕ ಮಂದಿ ಭಾಗವಹಿಸಿದ್ದರು.