ಮಡಿಕೇರಿ, ಏ. 2: ಸೇನಾ ನೇಮಕಾತಿ ವಲಯ, ಬೆಂಗಳೂರು ಇವರು ಮೇ 27 ರಿಂದ ಜೂನ್ 4 ರವರೆಗೆ ಜಿಲ್ಲಾ ಕ್ರೀಡಾಂಗಣ, ಮ್ಯಾನ್ಸ್ ಕಾಂಪೌಂಡ್, ಮಡಿಕೇರಿಯಲ್ಲಿ ಕೆಳಕಂಡ ಹುದ್ದೆಗಳಿಗೆ ಭಾರತೀಯ ಸೇನಾ ನೇಮಕಾತಿ ರ್ಯಾಲಿಯನ್ನು ಆಯೋಜಿಸಿದ್ದಾರೆ.

ಸಿಪಾಯಿ ಸಾಮಾನ್ಯ ಕರ್ತವ್ಯ, ಸೈನಿಕ ಲಿಪಿಕ-ಉಗ್ರಾಣ ಪಾಲಕ ತಾಂತ್ರಿಕ, ಸಿಪಾಯಿ ತಾಂತ್ರಿಕ, ಸೈನಿಕ ಟ್ರೇಡ್ಸ್‍ಮೆನ್, ಸೈನಿಕ ಶುಶ್ರೂಷಾ ಸಹಾಯಕ ಮತ್ತು ಸೈನಿಕ ಶುಶ್ರೂಷಾ ಸಹಾಯಕ ಪಶುವೈದ್ಯ. ನೇಮಕಾತಿ ರ್ಯಾಲಿಯಲ್ಲಿ ಭಾಗವಹಿಸಲು ಇಚ್ಛಿಸುವ ಅರ್ಹ ಅಭ್ಯರ್ಥಿಗಳು ತಿತಿತಿ. ರಿoiಟಿiಟಿಜiಚಿಟಿಚಿಡಿmಥಿ.ಟಿiಛಿ.iಟಿ ಮುಖಾಂತರ ಮೇ 14 ರೊಳಗೆ ಆನ್‍ಲೈನ್ ನೋಂದಾಯಿಸಿಕೊಳ್ಳಬಹುದಾಗಿದೆ. ಆನ್‍ಲೈನಲ್ಲಿ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಅಡ್ಮಿಟ್ ಕಾರ್ಡ್‍ನೊಂದಿಗೆ ತಮಗೆ ನಿಗದಿಪಡಿಸಿರುವ ದಿನಾಂಕದಂದು ಬೆಳಿಗ್ಗೆ 4 ಗಂಟೆಗೆ ಅಗತ್ಯ ದಾಖಲಾತಿಗಳೊಂದಿಗೆ ನೇಮಕಾತಿ ರ್ಯಾಲಿ ನಡೆಯುವ ಸ್ಥಳದಲ್ಲಿ ಹಾಜರಿರಬೇಕಾಗಿದೆ.

ಹೆಚ್ಚಿನ ವಿವರಗಳಿಗೆ ಉದ್ಯೋಗಾಧಿಕಾರಿ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಕೊಡಗು ಜಿಲ್ಲೆ, ಮಡಿಕೇರಿ ಇವರನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿ ಸಿ. ಜಗನಾಥ್ ತಿಳಿಸಿದ್ದಾರೆ.