ಸಿದ್ದಾಪುರ, ಏ. 3: ನೀರು ಬಿಡಲಿಲ್ಲ ಎಂಬ ಕಾರಣಕ್ಕಾಗಿ ವಾಟರ್ ಮ್ಯಾನ್ ಮೇಲೆ ಹಲ್ಲೆ ನಡೆಸಿರುವ ಘಟನೆ ಕೊಂಡಂಗೇರಿ ಗ್ರಾಮದಲ್ಲಿ ನಡೆದಿದೆ.

ಕೊಂಡಂಗೇರಿಯ ವಾಟರ್ ಮ್ಯಾನ್ ಸಿಕಂದರ್ ಎಂಬವರು ಭಾನುವಾರದಂದು ನೀರು ಬಿಡಲಿಲ್ಲ ಎಂಬ ಕಾರಣಕ್ಕೆ ಅಲ್ಲಿನ ನಿವಾಸಿ ಆಲೀಜ್ ಎಂಬಾತ ದೊಣ್ಣೆಯಿಂದ ಸಿಕಂದರ್‍ನ ಕುತ್ತಿಗೆ ಹಾಗೂ ಶರೀರಕ್ಕೆ ಹಲ್ಲೆ ನಡೆಸಿದ್ದಾನೆ ಎಂದು ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪುಕಾರು ನೀಡಿದ್ದಾರೆ. ದೂರಿನನ್ವಯ ಸಿದ್ದಾಪುರ ಪೊಲೀಸರು ಆಲೀಜ್ ಮೇಲೆ ಮೊಕದ್ದಮೆ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.