ಕುಶಾಲನಗರ, ಏ. 3: ಕುಶಾಲನಗರ ಶ್ರೀ ವಾಸವಿ ಕನ್ನಿಕಾ ಪರಮೇಶ್ವರಿ ಟ್ರಸ್ಟ್, ವಾಸವಿ ಯುವಜನ ಸಂಘ ಮತ್ತು ಜಿಲ್ಲಾ ರಕ್ತನಿಧಿ ಕೇಂದ್ರ ಸಂಯುಕ್ತ ಆಶ್ರಯದಲ್ಲಿ ವಿಶ್ವ ರಕ್ತದಾನಿಗಳ ದಿನಾಚರಣೆ ಪ್ರಯುಕ್ತ ಸ್ವಯಂಪ್ರೇರಿತ ರಕ್ತದಾನ ಶಿಬಿರ ಏರ್ಪಡಿಸಲಾಗಿತ್ತು. ಸ್ಥಳೀಯ ವಾಸವಿ ಮಹಲ್ ಹಿಂಭಾಗದ ಆವರಣದಲ್ಲಿ ನಡೆದ ಶಿಬಿರವನ್ನು ರಕ್ತದಾನ ಮಾಡುವ ಮೂಲಕ ಆರ್ಯವೈಶ್ಯ ಮಂಡಳಿ ಅಧ್ಯಕ್ಷ ಬಿ.ಎಲ್. ಸತ್ಯನಾರಾಯಣ ಚಾಲನೆ ನೀಡಿದರು.

ನಂತರ ವಾಸವಿ ಯುವಜನ ಸಂಘದ ಅಧ್ಯಕ್ಷ ವಿ.ಆರ್. ಮಂಜುನಾಥ್ ಅಧ್ಯಕ್ಷತೆಯಲ್ಲಿ ನಡೆದ ಸರಳ ಸಭೆಯಲ್ಲಿ ಮಾತನಾಡಿದ ಬಿ.ಎಲ್. ಸತ್ಯನಾರಾಯಣ, ರಕ್ತದಾನ ಮಾಡುವ ಮೂಲಕ ರಕ್ತದ ಅವಶ್ಯಕತೆ ಇರುವ ರೋಗಿಗಳ ಜೀವ ಉಳಿಸಲು ಸಾಧ್ಯ ಎಂದರು.

ಜಿಲ್ಲಾ ಆಸ್ಪತ್ರೆಯ ರಕ್ತನಿಧಿ ಕೇಂದ್ರದ ವೈದೆÀ್ಯ ಡಾ. ನಾಗಲಕ್ಷ್ಮಿ ಮಾತನಾಡಿ, ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನ ಮಾಡಲು ಪ್ರತಿಯೊಬ್ಬರೂ ಮುಂದೆ ಬರಬೇಕಾಗಿದೆ ಎಂದರು. ಶಿಬಿರದಲ್ಲಿ 44 ಮಂದಿ ರಕ್ತದಾನ ಮಾಡಿದರು.

ಈ ಸಂದರ್ಭ ವಾಸವಿ ಯುವತಿಯರ ಸಂಘದ ಅಧ್ಯಕ್ಷೆ ರಶ್ಮಿ ಅಮೃತ್, ಮಹಿಳಾ ಮಂಡಳಿ ಅಧ್ಯಕ್ಷೆ ಆಶಾ ಅಶೋಕ್, ಕನ್ನಿಕಾ ವಿವಿದೋದ್ಧೇಶ ಬ್ಯಾಂಕಿನ ಉಪಾಧ್ಯಕ್ಷ ಅಮೃತ್, ಯೋಜನಾ ನಿರ್ದೇಶಕರಾದ ಅರ್ಜುನ್, ಕೆ. ಪ್ರವೀಣ್ ಇದ್ದರು.