ಮಡಿಕೇರಿ, ಏ. 4: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರಸಭೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ತಾ. 5 ರಂದು (ಇಂದು) ಬೆಳಿಗ್ಗೆ 11.30 ಗಂಟೆಗೆ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ಹಸಿರು ಕ್ರಾಂತಿ ಹರಿಕಾರ ಡಾ. ಬಾಬು ಜಗಜೀವನ್‍ರಾಮ್ ಅವರ 110ನೇ ಜನ್ಮ ದಿನಾಚರಣೆ ನಡೆಯಲಿದೆ.

ಜಿಲ್ಲಾ ಉಸ್ತುವಾರಿ ಸಚಿವ ಎಂ.ಆರ್. ಸೀತಾರಾಂ ಹಾಗೂ ಜನಪ್ರತಿನಿಧಿಗಳು, ಪ್ರಾಧ್ಯಾಪಕ ಡಾ. ಶ್ರೀಧರ್ ಹೆಗಡೆ ಇತರರು ಪಾಲ್ಗೊಳ್ಳಲಿದ್ದಾರೆ.