ಮಡಿಕೇರಿ, ಏ. 7: ಕೊಡಗು ಜಿಲ್ಲಾ ಮಡಿವಾಳರ ಸಂಘದ ವತಿಯಿಂದ ಶ್ರೀ ಜಗದ್ಗುರು ವೀರಗಣಾಚಾರಿ ಮಡಿವಾಳ ಮಾಚಿ ದೇವರ ಜಯಂತೋತ್ಸವವನ್ನು ತಾ. 9 ರಂದು ಬೆಳಿಗ್ಗೆ 11 ಗಂಟೆಗೆ ನಗರದ ದಾಸವಾಳ ರಸ್ತೆಯ ಶ್ರೀ ವೀರಭದ್ರ ಮುನೇಶ್ವರ ದೇವಾಲಯದಲ್ಲಿ ಆಯೋಜಿಸಲಾಗಿದೆ. ಜಯಂತೋತ್ಸವದ ಉದ್ಘಾಟನೆಯನ್ನು ಕ.ಸಾ.ಪ. ಜಿಲ್ಲಾಧ್ಯಕ್ಷ ಲೋಕೇಶ್ ಸಾಗರ್ ನೆರವೇರಿಸಲಿದ್ದು, ಅಧ್ಯಕ್ಷತೆಯನ್ನು ಕೊಡಗು ಜಿಲ್ಲಾ ಮಡಿವಾಳರ ಸಂಘದ ಅಧ್ಯಕ್ಷ ಎಂ.ಡಿ. ನಂಜಪ್ಪ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ನಗರಸಭಾ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ, ಉಪಾಧ್ಯಕ್ಷ ಟಿ.ಎಸ್. ಪ್ರಕಾಶ್ ಹಾಗೂ ಇನ್ನಿತರರು ಭಾಗವಹಿಸಲಿದ್ದು, ಮುಖ್ಯ ಭಾಷಣವನ್ನು ಶಕ್ತಿ ದಿನಪತ್ರಿಕೆಯ ಸಹಾಯಕ ಸಂಪಾದಕ ಚಿ.ನಾ. ಸೋಮೇಶ್ ಮಾಡಲಿದ್ದಾರೆ.