ಮಡಿಕೇರಿ, ಏ. 7: ನಗರದ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದಿಂದ ಖಾಸಗಿ ಬಸ್ ನಿಲ್ದಾಣಕ್ಕೆ ತೆರಳುವ ಮಾರ್ಗ ಬದಿ ನಗರಸಭೆಯಿಂದ ರೂ. 4.75 ಲಕ್ಷ ವೆಚ್ಚದ ಪಾದಚಾರಿ ಮಾರ್ಗ ಕಲ್ಪಿಸಲಾಗಿದೆ. ಈ ಹಿಂದೆ ಲಭ್ಯವಾಗಿದ್ದ ಅನುದಾನದಿಂದ ಸಂಬಂಧಿಸಿದ ಕಾಮಗಾರಿ ಕೈಗೊಂಡಿದ್ದು, ಪಾದಚಾರಿಗಳಿಗೆ ಅನುಕೂಲವಾಗಲಿದೆ ಎಂದು ನಗರಸಭಾ ಸದಸ್ಯ ಪ್ರಕಾಶ್ ಆಚಾರ್ಯ ತಿಳಿಸಿದ್ದಾರೆ. 14ನೇ ಹಣಕಾಸು ಯೋಜನೆಯಡಿ ಈ ಕೆಲಸ ಮಾಡಿಸಲಾಗಿದೆ.