ವೀರಾಜಪೇಟೆ, ಏ. 11: ಛತ್ರಕೆರೆ ಬಳಿಯಿರುವ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಇಂದು ಶ್ರೀ ಹನುಮ ಜಯಂತಿಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಹನುಮ ಜಯಂತಿಯ ಅಂಗವಾಗಿ ಬೆಳಿಗ್ಗೆಯಿಂದಲೇ ದೇವಾಲಯದಲ್ಲಿ ಸಾಂಪ್ರ್ರದಾಯಿಕ ಪೂಜೆ ಹಾಗೂ ವಿಶೇಷ ಪೂಜಾ ಕಾರ್ಯಗಳು ನೆರವೇರಿತು. ಮಧ್ಯಾಹ್ನ ಮಹಾಪೂಜೆ ಜರುಗಿತು. ಪೂಜೆಯ ನಂತರ ಭಕ್ತಾದಿಗಳಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.

ಮಡಿಕೇರಿ: ನಗರದ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಹನುಮ ಜಯಂತಿ ಪ್ರಯುಕ್ತ ವಿಶೇಷ ಪೂಜೆ, ಅಭಿಷೇಕ, ಶ್ರೀ ರಾಮತಾರಕ ಹೋಮ ನಡೆಯಿತು. ರಂಗಪೂಜೆ ನೆರವೇರಿತು.