ಕುಶಾಲನಗರ, ಏ. 24: ಭಾರತೀಯ ರಾಷ್ಟ್ರೀಯ ಮಜ್ದೂರು ಕಾಂಗ್ರೆಸ್ ಜಿಲ್ಲಾ ಘಟಕದ ವತಿಯಿಂದ ತಾ. 25 ರಂದು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ 126ನೇ ಜನ್ಮದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಇಂಟೆಕ್ ಕೊಡಗು ಜಿಲ್ಲಾಧ್ಯಕ್ಷ ಟಿ.ಪಿ.ಹಮೀದ್ ತಿಳಿಸಿದ್ದಾರೆ.

ಕೂಡಿಗೆಯಲ್ಲಿ ಎರಡು ದಿನಗಳ ಕಾಲ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು ತಾ. 24 ರಂದು ಕಬಡ್ಡಿ ಪಂದ್ಯಾವಳಿ ಜೈಭೀಮ್ ಕಪ್ ಏರ್ಪಡಿಸಲಾಗಿದೆ. 10 ಕ್ಕೂ ಅಧಿಕ ತಂಡಗಳು ಪಾಲ್ಗೊಳ್ಳಲಿದೆ. ತಾ. 25 ರಂದು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರ ಮೆರವಣಿಗೆ ನಡೆಯಲಿದೆ. ಡಾ.ಅಂಬೇಡ್ಕರ್ ಜಯಂತಿ ಪ್ರಯುಕ್ತ ಕೂಡಿಗೆಯ ಅನಾಥಾಶ್ರಮದ ವಾಸಿಗಳಿಗೆ ವಸ್ತ್ರ ವಿತರಣೆ ಕಾರ್ಯಕ್ರಮ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಸಾಧಕರನ್ನು ಗುರುತಿಸಿ ಸನ್ಮಾನಿಸಿ ಗೌರವಿಸಲಾಗುತ್ತದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಇಂಟೆಕ್ ರಾಜ್ಯ ಜಂಟಿ ಪ್ರಧಾನ ಕಾರ್ಯದರ್ಶಿ ನಾಪಂಡ ಮುದ್ದಪ್ಪ ನೆರವೇರಿಸು ವರು. ರಾಜ್ಯ ಉಪಾಧ್ಯಕ್ಷ ನಾಪಂಡ ಮುತ್ತಪ್ಪ, ಪ್ರಮುಖರಾದ ಡಿ.ಗೋಪಾಲ್, ಕೆ.ಎಂ.ಕುಂಞ ಅಬ್ದುಲ್ಲಾ ಮತ್ತಿತರರು ಉಪನ್ಯಾಸ ನೀಡಲಿದ್ದಾರೆ ಎಂದು ಹಮೀದ್ ಮಾಹಿತಿ ನೀಡಿದರು. ಈ ಸಂದರ್ಭ ಪ್ರಮುಖರಾದ ಗೋವಿಂದರಾಜ್ ದಾಸ್ ಇದ್ದರು.