ಕುಶಾಲನಗರ, ಏ. 26: ಜೆಡಿಎಸ್ ಮುಖಂಡರು ಹಾಗೂ ಮಾಜಿ ಸಚಿವರಾದ ಬಿ.ಎ.ಜೀವಿಜಯ ಅವರು ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್‍ನಿಂದ ಸ್ಪರ್ಧೆ ನಡೆಸುವ ಬಗ್ಗೆ ಕೆಲವರು ನೀಡಿದ ಹೇಳಿಕೆ ಹಾಸ್ಯಾಸ್ಪದ ಎಂದು ಯುವ ಜಾತ್ಯಾತೀತ ಜನತಾದಳದ ಜಿಲ್ಲಾ ಅಧ್ಯಕ್ಷ ಸಿ.ಎಲ್.ವಿಶ್ವ ತಿಳಿಸಿದ್ದಾರೆ.

ಕುಶಾಲನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಾಂಗ್ರೆಸ್ ಪಕ್ಷದಲ್ಲಿ ಚಲಾವಣೆಯಿಲ್ಲದ ಕೆಲವು ಕಾರ್ಯಕರ್ತರು ಜೀವಿಜಯ ಅವರ ಬಗ್ಗೆ ಪತ್ರಿಕಾ ಹೇಳಿಕೆ ನೀಡುವ ಮೂಲಕ ಗೊಂದಲ ಸೃಷ್ಠಿ ಮಾಡುವ ಹುನ್ನಾರ ನಡೆಸುತ್ತಿದ್ದಾರೆ. ಜೀವಿಜಯ ಅವರು ಕಾಂಗ್ರೆಸ್ ಸೇರುವ ಅನಿವಾರ್ಯತೆ ಯಾವದೇ ಸಂದರ್ಭ ಉಂಟಾಗುವದಿಲ್ಲ. ಪಕ್ಷದ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದ ಪಕ್ಷದಲ್ಲಿ ಕೆಲವು ವರ್ಷಗಳಿಂದ ಪಕ್ಷ ಸಂಘಟನೆಯಲ್ಲಿ ತೊಡಗುವದರೊಂದಿಗೆ ಕಾರ್ಯಕರ್ತರ ಬಲವರ್ಧನೆಗೆ ಶ್ರಮಿಸುತ್ತಿರುವ ಜೀವಿಜಯ ಅವರು ಮಡಿಕೇರಿ ಕ್ಷೇತ್ರದಿಂದ ಈ ಬಾರಿ ಸ್ಪರ್ಧಿಸಿ ಗೆಲುವು ಸಾಧಿಸುವದು ಖಚಿತ ಎಂದು ಪ್ರತಿಪಾದಿಸಿದ್ದಾರೆ. ಈ ಸಂದರ್ಭ ಪಕ್ಷದ ಕಾರ್ಯದರ್ಶಿ ಬಿ.ಎಸ್.ಚಂಗಪ್ಪ, ಆರ್‍ಎಂಸಿ ಸದಸ್ಯ ರಾಮಚಂದ್ರ, ಕೂಡಿಗೆ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಕೆ.ಎಸ್.ಕಾಂತರಾಜು ಇದ್ದರು.