ಕೂಡಿಗೆ, ಏ. 27: ಕೂಡಿಗೆಯಲ್ಲಿ ಐಎನ್‍ಟಿಯೂಸಿ ವತಿಯಿಂದ ಡಾ.ಬಿ.ಆರ್. ಅಂಬೇಡ್ಕರ್ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಜೈ- ಭೀಮ್ ಕಪ್ ಕಬಡ್ಡಿ ಪಂದ್ಯಾವಳಿಯಲ್ಲಿ ಕುಶಾಲನಗರ ಮಿನಿಸ್ಟರ್ ಕೋರ್ಟ್ ತಂಡ ಪ್ರಥಮ ಸ್ಥಾನವನ್ನು ಪಡೆದು ಟ್ರೋಫಿ ಹಾಗೂ ನಗದು ಬಹುಮಾನ ಗಳಿಸಿದೆ.ಕೂಡಿಗೆಯ ಶ್ರೀ ಸಾಯಿ ಸ್ಪೋಟ್ರ್ಸ್ ಕ್ಲಬ್ ದ್ವಿತೀಯ ಸ್ಥಾನ ಗಳಿಸಿತು.

ಬಹುಮಾನ ವಿತರಣಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಐಎನ್‍ಟಿಯೂಸಿ ಅಧ್ಯಕ್ಷ ಟಿ.ಪಿ. ಹಮೀದ್ ವಹಿಸಿದ್ದರು. ರಾಜ್ಯ ಐಎನ್‍ಟಿಯೂಸಿ ಉಪಾಧ್ಯಕ್ಷ ನಾಪಂಡ ಮುತ್ತಪ್ಪ ವಿಜೇತ ತಂಡಗಳಿಗೆ ಬಹುಮಾನ ವಿತರಣೆ ಮಾಡಿದರು.

ಈ ಸಂದರ್ಭ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಸ್.ಎನ್. ರಾಜಾರಾವ್, ಜಿಲ್ಲಾ ದಲಿತ ಹಿತರಕ್ಷಣಾ ಸಮಿತಿಯ ಅಧ್ಯಕ್ಷ ಬಿ.ಡಿ. ಅಣ್ಣಯ್ಯ, ತೊರೆನೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಕಿಶೋರ್ ಕುಮಾರ್, ಕೂಡುಮಂಗಳೂರು ಗ್ರಾಮ ಪಂಚಾಯಿತಿ ಸದಸ್ಯೆ ಫಿಲೋಮಿನಾ, ಐಎನ್‍ಟಿಯೂಸಿ ಕಾರ್ಯ ದರ್ಶಿಗಳಾದ ಗೋವಿಂದರಾಜ್ ದಾಸ್, ಧರ್ಮಪ್ಪ ಇದ್ದರು.