ಗೋಣಿಕೊಪ್ಪಲು, ಏ. 27: ಒಕ್ಕಲಿಗರ ಯುವ ವೇದಿಕೆ ವತಿಯಿಂದ ನಡೆಯಲಿರುವ 2 ನೇ ವರ್ಷದ ಒಕ್ಕಲಿಗರ ಕ್ರೀಡಾಕೂಟಕ್ಕೆ ಹಾತೂರು ಪ್ರೌಡಶಾಲೆಯ ಫೀಲ್ಡ್ ಮಾರ್ಷಲ್ ಕೊಡಂದೇರ ಕಾರ್ಯಪ್ಪ ಮೈದಾನದಲ್ಲಿ ತಾ. 28 ರಂದು (ಇಂದು) ಚಾಲನೆ ಸಿಗಲಿದೆ. ಮೂರು ದಿನಗಳ ಕಾಲ ನಡೆಯಲಿರುವ ಕ್ರೀಡಾಕೂಟವನ್ನು ಶಾಸಕ ಕೆ.ಜಿ.ಬೋಪಯ್ಯ ಉದ್ಘಾಟಿಸಲಿದ್ದಾರೆ.

ಈ ಸಂದರ್ಭ ಒಕ್ಕಲಿಗ ಸಂಘದ ಜಿಲ್ಲಾಧ್ಯಕ್ಷ ಎಸ್.ಎಮ್.ಚಂಗಪ್ಪ, ಜಿ.ಪಂ. ಅಧ್ಯಕ್ಷ ಬಿ.ಎ. ಹರೀಶ್, ಒಕ್ಕಲಿಗರ ಯುವ ವೇದಿಕೆ ಅಧ್ಯಕ್ಷ ಬಿ.ಜೆ.ದೀಪಕ್, ಒಳಚರಂಡಿ ಮಂಡಳಿ ಮಾಜಿ ಅಧ್ಯಕ್ಷೆ ಕೆ.ಪಿ. ಚಂದ್ರಕಲಾ, ಜಿ.ಪಂ. ಸದಸ್ಯರುಗಳಾದ ಸಿ.ಕೆ. ಬೋಪಣ್ಣ, ಬಿ.ಎನ್. ಪೃಥ್ವಿ, ಜಿ.ಪಂ. ಮಾಜಿ ಸದಸ್ಯ ವಿ.ಪಿ. ಶಶಿಧರ್, ಹಾತೂರು ಗ್ರಾ.ಪಂ ಸದಸ್ಯರುಗಳಾದ ಹಂಚಿನಮನೆ ಶ್ರೀನಿವಾಸ್, ವಿ.ಆರ್. ರೇಖಾ, ವಿದ್ಯಾಭಿವೃದ್ದಿ ಸಂಘದ ಅಧ್ಯಕ್ಷ ವಿ.ಎಸ್.ಸುಬ್ರಮಣಿ, ಉಪಾಧ್ಯಕ್ಷ ಕೆ.ಪಿ. ನಾಗರಾಜ್, ವಕ್ಕಲಿಗರ ಮಡಿಕೇರಿ ತಾಲೂಕು ಸಂಘದ ಅಧ್ಯಕ್ಷ ಕೃಷ್ಣರಾಜು, ಕುಶಾಲನಗರ ಯುವ ವೇಧಿಕೆ ಅಧ್ಯಕ್ಷ ಎಂ.ಡಿ. ಕೃಷ್ಣಪ್ಪ, ಯುವ ಮುಖಂಡ ಹರೀಶ್ ಬೋಪಣ್ಣ, ಉದ್ಯಮಿ ಎ. ಪ್ರವೀಣ್ ಪಾಲ್ಗೊಳ್ಳಲಿದ್ದಾರೆ.

40 ತಂಡಗಳು ಕ್ರಿಕೆಟ್‍ನಲ್ಲಿ ಪಾಲ್ಗೊಳ್ಳಲ್ಲಿವೆ. ಮಹಿಳೆಯರಿಗೆ ಹಗ್ಗಜಗ್ಗಾಟ, ಮಕ್ಕಳಿಗೆ ವಿವಿಧ ಕ್ರೀಡಾಕೂಟ ಏರ್ಪಡಿಸಲಾಗಿದೆ ಎಂದು ತಾಲೂಕು ಅಧ್ಯಕ್ಷ ಮಹೇಶ್ ತಿಳಿಸಿದ್ದಾರೆ.