ಮಡಿಕೇರಿ, ಏ. 28: ಕೊಡಗು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಪಾಲಿಬೆಟ್ಟ ಶಾಖೆಯ ಉದ್ಘಾಟನೆ ಮೇ 1ರಂದು ಬೆಳಿಗ್ಗೆ 10.30ಕ್ಕೆ ನಡೆಯಲಿದೆ. ಶಾಸಕ ಕೆ.ಜಿ. ಬೋಪಯ್ಯ ಉದ್ಘಾಟಿಸಲಿದ್ದು, ಜಿಲ್ಲಾ ಕೇಂದ್ರ ಬ್ಯಾಂಕ್ ಅಧ್ಯಕ್ಷ ಬಿ.ಡಿ. ಮಂಜುನಾಥ್ ಅಧ್ಯಕ್ಷತೆ ವಹಿಸಲಿದ್ದಾರೆ. ಶಾಸಕ ಎಂ.ಪಿ. ಅಪ್ಪಚ್ಚು ರಂಜನ್, ಮೇಲ್ಮನೆ ಸದಸ್ಯರಾದ ಸುನಿಲ್ ಸುಬ್ರಮಣಿ, ವೀಣಾ ಅಚ್ಚಯ್ಯ ಸೇರಿದಂತೆ ಜಿ.ಪಂ. ಹಾಗೂ ತಾ.ಪಂ. ಪ್ರತಿನಿಧಿಗಳು, ಸ್ಥಳೀಯ ಪ್ರಮುಖರು ಭಾಗವಹಿಸಲಿದ್ದಾರೆ.