ಸೋಮವಾರಪೇಟೆ,ಏ.30: ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ನಗರ ಗಾರೆ ಮತ್ತು ಇತರ ಕಾರ್ಮಿಕರ ಸಂಘ ಹಾಗೂ ಓಂ ಶ್ರೀ ಸಿದ್ಧಿವಿನಾಯಕ ಕರಕುಶಲ ಕಾರ್ಮಿಕರ ಸಂಘÀದ ಸಹಯೋಗದಲ್ಲಿ ಮೇ 1ರಂದು (ಇಂದು) ಕಾರ್ಮಿಕರ ದಿನಾಚರಣೆ ನಡೆಯಲಿದೆ.

ಇಲ್ಲಿನ ಸ್ತ್ರೀ ಶಕ್ತಿ ಭವನದಲ್ಲಿ ಬೆಳಿಗ್ಗೆ 11ಗಂಟೆಗೆ ನಡೆಯುವ ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶ ಪರಶುರಾಮ್ ಎಫ್. ದೊಡ್ಡಮನಿ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ವಕೀಲರ ಸಂಘದ ಅಧ್ಯಕ್ಷ ಎಂ.ಬಿ. ಅಭಿಮನ್ಯುಕುಮಾರ್ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ತಹಶೀಲ್ದಾರ್ ಜಿ.ಎಸ್. ಕೃಷ್ಣ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ್, ಪೊಲೀಸ್ ವೃತ್ತ ನಿರೀಕ್ಷಕ ಪರಶಿವಮೂರ್ತಿ ಹಾಗೂ ಕಾರ್ಮಿಕ ನಿರೀಕ್ಷಕ ಮಹದೇವಸ್ವಾಮಿ ಪಾಲ್ಗೊಳ್ಳಲಿದ್ದಾರೆ.

ಇದೇ ಸಂದರ್ಭ ಕಟ್ಟಡ ಕಾರ್ಮಿಕರಿಗೆ ಗುರುತಿನ ಚೀಟಿ ವಿತರಿಸಲಾಗುವದು ಎಂದು ಪ್ರಕಟಣೆ ತಿಳಿಸಿದೆ.