ಸೋಮವಾರಪೇಟೆ, ಮೇ 3: ಬೈಕ್ ತಡೆದು ಹಲ್ಲೆ ನಡೆಸಿ ಕೊಲೆಬೆದರಿಕೆ ಒಡ್ಡಿರುವ ಕುರಿತು ಪಟ್ಟಣದ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದೆ.ಸಮೀಪದ ನೇರಳೆ ಗ್ರಾಮದ ನಿವಾಸಿ ಟಿ.ಎಸ್. ಪ್ರಸಾದ್ ಅವರು ತಮ್ಮ ಮಗ ಶ್ರೇಯಸ್‍ನೊಂದಿಗೆ ತೋಟಕ್ಕೆ ತೆರಳುತ್ತಿದ್ದ ಸಂದರ್ಭ ದಾರಿ ಮಧ್ಯೆ ಅಡ್ಡಹಾಕಿದ ಅದೇ ಗ್ರಾಮದ ನಿವಾಸಿ ದಿನೇಶ್ ಎಂಬಾತ, ಹಳೆ ವೈಷಮ್ಯದಿಂದ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಕೊಲೆ ಬೆದರಿಕೆ ಹಾಕಿರುವದಾಗಿ ಪ್ರಸಾದ್ ಅವರು ದೂರು ನೀಡಿದ್ದಾರೆ. ದೂರನ್ನು ದಾಖಲಿಸಿಕೊಂಡಿರುವ ಸೋಮವಾರ ಪೇಟೆ ಪೊಲೀಸ್ ಠಾಣೆಯ ಸಿಬ್ಬಂದಿಗಳು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.