ಮಡಿಕೇರಿ, ಮೇ 6: ಕೊಂಡಂಗೇರಿ ಶಿಫಾ ಕೇಂದ್ರ ಮುಸಾಫರ್ ಖಾನಾ ಸಂಸ್ಥೆಯ 30 ನೇ ವಾರ್ಷಿಕೋತ್ಸವದ ಪ್ರಯುಕ್ತ ಪ್ರತಿಭಾ ಪುರಸ್ಕಾರ ಸಮಾರಂಭ ತಾ. 7 ರಂದು ಮಧ್ಯಾಹ್ನ 2ಗಂಟೆಗೆ ಶಿಫಾ ಕೇಂದ್ರದಲ್ಲಿ ನಡೆಯಲಿದೆ. ಮಾಜಿ ಶಾಸಕ ಕೆ.ಎಂ.ಇಬ್ರಾಹಿಂ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭವನ್ನು ಧರ್ಮಗುರು ದುಗ್ಗಲಡ್ಕ ಸಯ್ಯದ್ ಝೈನುಲ್ ಆಭಿದೀನ್ ತಂಞಳ್ ಉದ್ಘಾಟಿಸಲಿದ್ದಾರೆ. ವೀರಾಜಪೇಟೆಯ ಸಂತ ಅನ್ನಮ್ಮ ಪದವಿ ಕಾಲೇಜಿನ ಕನ್ನಡ ಭಾಷಾ ಅಧ್ಯಯನ ವಿಭಾಗದ ಮುಖ್ಯಸ್ಥ ಹೆಚ್.ಆರ್. ಅರ್ಜುನ್ ಶಿಕ್ಷಣದ ಮಹತ್ವ ಕುರಿತು ಭಾಷಣ ಮಾಡಲಿದ್ದಾರೆ. ಧರ್ಮಗುರು ಅಬ್ದುಲ್ ರಹ್ಮಾನ್ ಮುಸ್ಲಿಯಾರ್ ಆನಮಜಾಡ್, ಹಾಲುಗುಂದ ಗ್ರಾಮ ಪಂಚಾಯಿತಿ ಅಧ್ಯಕ್ಷ ಎ.ಎಂ. ಶಾದುಲಿ, ಮಾಜಿ ಅಧ್ಯಕ್ಷ ಎಂ.ಕೆ. ನಾಚಪ್ಪ, ಮಾಜಿ ಉಪಾಧ್ಯಕ್ಷ ಕೆ.ಎಂ. ಶಾದುಲಿ, ಚಾಯಿಪ್ಪ ಪಾಲ್ಗೊಳ್ಳಲಿದ್ದಾರೆ. ಪ್ರತಿಭಾ ಪುರಸ್ಕಾರಕ್ಕೆ 62 ವಿದ್ಯಾರ್ಥಿಗಳು ಆಯ್ಕೆಗೊಂಡಿದ್ದು, ಮಂಗಳೂರು ವಿಶ್ವ ವಿದ್ಯಾನಿಲಯದಲ್ಲಿ ಕನ್ನಡ ಎಂ.ಎ.ಯಲ್ಲಿ ಚಿನ್ನದ ಪದಕ ಗಳಿಸಿರುವ ಮಾದಾಪುರದ ಪ್ರತಿಭಾವಂತ ವಿದ್ಯಾರ್ಥಿ ಕೆ.ಹೆಚ್.ಮುಸ್ತಫಾ ಅವರನ್ನು ಕೂಡ ಸಮಾರಂಭದಲ್ಲಿ ಸನ್ಮಾನಿಸಲಾಗುವದು ಎಂದು ಕೇಂದ್ರದ ಮುಖ್ಯಸ್ಥ ಸಿ.ಬಿ. ಮೊಹಮ್ಮದ್ ಅಸ್ರತ್ ಬಾಬಾ ತಿಳಿಸಿದ್ದಾರೆ.