ಮಡಿಕೇರಿ, ಮೇ 10: ಹಾಕತ್ತೂರು ನಿವಾಸಿ ಶಿವ ಎಂಬವರ ಪುತ್ರ ರಾಜೇಶ್ (25) ಎಂಬಾತ ಇಂದು ಬೆಳಿಗ್ಗೆ ಸಂಭವಿಸಿದ ರಸ್ತೆ ಅಪಘಾತವೊಂದರಲ್ಲಿ ಗಂಭೀರ ಸ್ವರೂಪದ ಗಾಯಗೊಂಡು ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದಾನೆ.
ತಾನು ತೆರಳುತ್ತಿದ್ದ ಬೈಕ್ನಲ್ಲಿ ಖಾಸಗಿ ಬಸ್ಸೊಂದಕ್ಕೆ ಡಿಕ್ಕಿಪಡಿಸಿದ ಪರಿಣಾಮ ಕಾಲು ಮುರಿದುಕೊಂಡಿದ್ದಾಗಿ ತಿಳಿದು ಬಂದಿದೆ. ಗಾಯಾಳು ರಾಜೇಶ್ಗೆ ಪ್ರಥಮ ಚಿಕಿತ್ಸೆ ಬಳಿಕ ಮಂಗಳೂರಿಗೆ ಕರೆದೊಯ್ಯಲಾಗಿದೆ. ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.