ಮಡಿಕೇರಿ, ಮೇ 11: ಅಪರಿಚಿತ ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಮೃತಪಟ್ಟಿರುವ ಬಗ್ಗೆ ವೀರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೇಚಿಯಂಡ ಈರಪ್ಪ ಅಲಿಯಾಸ್ ಎಂ. ರಘು ಅವರಿಗೆ ಸೇರಿದ ಕಂಡಂಗಾಲ ಗ್ರಾಮದಲ್ಲಿರುವ ಜಾಗದಲ್ಲಿ ಅಪರಿಚಿತ ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಮೃತಪಟ್ಟಿರುವ ದಾಗಿ ದೂರು ದಾಖಲಾಗಿದೆ. ಅಂದಾಜು 30 ರಿಂದ 35 ವರ್ಷ, 5.8 ಅಡಿ ಎತ್ತರ, ಸಾಧಾರಣ ಮೈಕಟ್ಟು, ದುಂಡು ಮುಖ, ತಿಳಿ ಬೂದು ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿರುತ್ತಾನೆ. ಮೃತರ ಸಂಬಂಧಿಕರಿದ್ದಲ್ಲಿ ವೀರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಕೋರಲಾಗಿದೆ.

ಮತ್ತೊಂದು ಶವ ಮಾಕುಟ್ಟದಿಂದ ವೀರಾಜಪೇಟೆ ಕಡೆಗೆ 3 ಕಿ.ಮೀ. ದೂರದ ಅರಣ್ಯ ಪ್ರದೇಶದಲ್ಲಿ ಗಂಡಸಿನ ಮೃತದೇಹ ಪತ್ತೆಯಾಗಿದೆ.

ದುಂಡು ಮುಖ, ಅಂದಾಜು 40 ರಿಂದ 45 ವರ್ಷ, ನೀಲಿ ಬಣ್ಣದ ಶರ್ಟ್ ಧರಿಸಿದ್ದು, ರಸ್ತೆಯ ಪಕ್ಕದಲ್ಲಿ ಕಪ್ಪು ಬಣ್ಣದ ಲುಂಗಿ ಹಾಗೂ ನೀಲಿ ಬಣ್ಣದ ಜೀನ್ ಪ್ಯಾಂಟ್ ದೊರೆತಿದೆ. ಸಂಬಂಧಿಕರಿದ್ದಲ್ಲಿ ವೀರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಕೋರಲಾಗಿದೆ.