ಕೂಡಿಗೆ, ಮೇ 10: ಕೂಡಿಗೆಯ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ(ಡಯಟ್)ಯಲ್ಲಿ ಕಳೆದ 5 ವರ್ಷಗಳಿಂದ ಉಪ ನಿರ್ದೇಶಕರೂ ಆಗಿದ್ದ ಪ್ರಾಂಶುಪಾಲ ಎಸ್. ದೊಡ್ಡಮಲ್ಲಪ್ಪ ಏಪ್ರಿಲ್ ಅಂತ್ಯಕ್ಕೆ ನಿವೃತ್ತಗೊಂಡ ಹಿನ್ನೆಲೆ ಉಪನ್ಯಾಸಕರು ಹಾಗೂ ಸಿಬ್ಬಂದಿ, ಪ್ರೌಢಶಾಲಾ ಸಹ ಶಿಕ್ಷಕರ ಸಂಘ, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ಸನ್ಮಾನಿಸಿ, ಬೀಳ್ಕೊಡಲಾಯಿತು.

ದೊಡ್ಡಮಲ್ಲಪ್ಪ ಮಾತನಾಡಿ, ಪ್ರತಿಯೊಬ್ಬರೂ ವೃತ್ತಿ ನೈಪುಣ್ಯತೆ ಹೊಂದಿ ಪ್ರಾಮಾಣಿಕ ಕೆಲಸ ನಿರ್ವಹಿಸುವ ಮೂಲಕ ಶಿಕ್ಷಣ ಕ್ಷೇತ್ರದ ಸಮಗ್ರ ಬೆಳವಣಿಗೆಗೆ ಶ್ರಮಿಸಬೇಕು ಎಂದರು. ಸಂಸ್ಥೆಯ ಪ್ರಬಾರ ಪ್ರಾಂಶುಪಾಲ ಬೊಮ್ಮೇಗೌಡ, ಪ್ರೌಢಶಾಲಾ ಶಿಕ್ಷಕರ ಸಂಘದ ಸಂಘಟನಾ ಕಾರ್ಯದರ್ಶಿ ಎಂ. ರಂಗಸ್ವಾಮಿ, ಜಿಲ್ಲಾ ಕಾರ್ಯದರ್ಶಿ ಹೆಚ್.ಜಿ. ಕುಮಾರ್, ಪದಾಧಿಕಾರಿಗಳಾದ ಟಿ.ಜಿ. ಪ್ರೇಮಕುಮಾರ್, ಹರೀಶ್, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಜಿಲ್ಲಾಧ್ಯಕ್ಷ ಹೆಚ್.ಎಸ್. ಚೇತನ್, ಸಂಘದ ಜಿಲ್ಲಾ ಗೌರವ ಉಪಾಧ್ಯಕ್ಷ ಎಸ್.ಎ. ಯೋಗೇಶ್, ಸಂಘದ ತಾಲೂಕು ಅಧ್ಯಕ್ಷ ಹೆಚ್.ಎನ್. ಮಂಜುನಾಥ್, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸಿ.ಟಿ. ಸೋಮಶೇಖರ್, ಕಾರ್ಯದರ್ಶಿ ಟಿ.ಕೆ. ಬಸವರಾಜ್, ಪದಾಧಿಕಾರಿಗಳಾದ ಎಸ್.ಕೆ.¸ Ëಭಾಗ್ಯ, ವನಜ ಇದ್ದರು.