ಮಡಿಕೇರಿ, ಮೇ 14: ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ಮುಖ್ಯಮಂತ್ರಿಯವರ ಕೌಶಲ್ಯ ಕರ್ನಾಟಕ ಯೋಜನೆಯಡಿ ಕೌಶಲ್ಯ ಅಭಿವೃದ್ದಿ ವೆಬ್ ಪೋರ್ಟಲ್‍ಗೆ ಜಿಲ್ಲಾ ಉಸ್ತುವಾರಿ ಸಚಿವ ಎಂಆರ್.ಸೀತಾರಾಂ ಚಾಲನೆ ನೀಡಲಿದ್ದಾರೆ. ಯುವಜನರಿಗೆ ಉದ್ಯೋಗ, ಮಾರುಕಟ್ಟೆಗೆ ಅಗತ್ಯವಿರುವ ನೈಪುಣ್ಯತೆ ತರಬೇತಿ ನೀಡಲು ವಿನ್ಯಾಸಗೊಳಿಸಲಾಗಿರುವ ವೆಬ್ ಪೋರ್ಟಲ್ ಚಾಲನಾ ಕಾರ್ಯಕ್ರಮವು ತಾ 15 ರಂದು (ಇಂದು) ಬೆಳಗ್ಗೆ 11 ಗಂಟೆಗೆ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ನಡೆಯಲಿದೆ.