ಸೋಮವಾರಪೇಟೆ, ಮೇ 16: ತಾಲೂಕಿನ ಐಗೂರು, ಯಡವಾರೆ, ಬೇಳೂರು, ಕಾರೇಕೊಪ್ಪ ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ ಮಿತಿಮೀರಿದ್ದು, ಕಾಡಾನೆಗಳನ್ನು ತಕ್ಷಣ ಸ್ಥಳಾಂತರ ಮಾಡುವಂತೆ ಆಗ್ರಹಿಸಿ ತಾ. 17ರಂದು (ಇಂದು) ಅರಣ್ಯ ಇಲಾಖಾ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಲಾಗುವದು ಎಂದು ಆನೆ ಹಾವಳಿ ಹೋರಾಟ ಸಮಿತಿ ಕಾರ್ಯದರ್ಶಿ ಮಚ್ಚಂಡ ಪ್ರಕಾಶ್ ಬೆಳ್ಯಪ್ಪ ತಿಳಿಸಿದ್ದಾರೆ. ಕಾಡಾನೆ ಹಾವಳಿ ಬಗ್ಗೆ ಕಳೆದ ತಾ. 24.03.2017ರಂದೇ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದು, ಈವರೆಗೂ ಯಾವದೇ ಸ್ಪಂದನೆ ದೊರಕದ ಹಿನ್ನೆಲೆ ಈ ಭಾಗದ ಗ್ರಾಮಸ್ಥರೊಡಗೂಡಿ ತಾ. 17ರಂದು ಪ್ರತಿಭಟನೆ ನಡೆಸಲಾಗುವದು ಎಂದು ಪ್ರಕಾಶ್ ತಿಳಿಸಿದ್ದಾರೆ.