ಮಡಿಕೇರಿ, ಮೇ 19: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ ತಾ. 22ರಂದು ಸೋಮವಾರದಂದು ಸಂಜೆ 4 ಗಂಟೆಗೆ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಸಂಪಾದಿಸಿ ಪ್ರಕಟಿಸಿದ, ಬಶೀರ್ ಅಹ್ಮದ್ ಕಿನ್ಯಾ ಸಂಪಾದಕತ್ವದ ನೂರು ಕವಿಗಳ ಪ್ರಥಮ ಬ್ಯಾರಿ ಕಾವ್ಯ ಸಂಪುಟ ಪುಸ್ತಕ ಬಿಡುಗಡೆ ಕಾರ್ಯಕ್ರಮ ಮಂಗಳೂರಿನ ಹಂಪನಕಟ್ಟೆಯ ಹೋಟೆಲ್ ಶ್ರೀನಿವಾಸ್ ಸಭಾಂಗಣದಲ್ಲಿ ನಡೆಯಲಿದೆ.

ಅರಣ್ಯ, ಪರಿಸರ ಜೀವಶಾಸ್ತ್ರ ಮತ್ತು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಪುಸ್ತಕ ಬಿಡುಗಡೆ ಮಾಡಲಿದ್ದು, ಶಾಸಕರು ಹಾಗೂ ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿ ವಿಧಾನ ಮಂಡಲ ಬೆಂಗಳೂರು ಇದರ ಅಧ್ಯಕ್ಷ ಜೆ. ಆರ್. ಲೋಬೋ ಪುಸ್ತಕ ಸ್ವೀಕರಿಸಲಿದ್ದಾರೆ. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖಾ ಸಚಿವ ಯು.ಟಿ. ಖಾದರ್, ಮುಖ್ಯ ಸಚೇತಕರು ಮತ್ತು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕÀ ಬಿ.ಎ. ಮೊಹಿಯುದ್ದೀನ್ ಬಾವ ಬ್ಯಾರಿ ಕವಿಗಳನ್ನು ಅಭಿನಂದಿಸಲಿರುವರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಕಾಡೆಮಿಯ ಅಧ್ಯಕ್ಷ ಬಿ.ಎ. ಮುಹಮ್ಮದ್ ಹನೀಫ್ ವಹಿಸಲಿದ್ದು, ಮಾಜಿ ಶಿಕ್ಷಣ ಸಚಿವ ಬಿ.ಎ. ಮೊಹಿದಿನ್, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷೆÀ ಜಾನಕಿ ಎಂ. ಬ್ರಹ್ಮಾವರ, ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ರಾಯ್ ಕ್ಯಾಸ್ತಲಿನೊ, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ರಹೀಂ ಉಚ್ಚಿಲ್, ದ.ಕ. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಮ್.ಆರ್. ರವಿ, ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ಮೊಹಮ್ಮದ್ ನಝೀರ್, ಸಾಹಿತಿ ಬಿ.ಎ. ಮುಹಮ್ಮದ್ ಅಲಿ, ಬಹುಭಾಷಾ ಸಾಹಿತಿ ಮುಹಮ್ಮದ್ ಬಡ್ಡೂರು, ಬ್ಯಾರಿ-ಕನ್ನಡ-ಇಂಗ್ಲಿಷ್ ನಿಘಂಟು ಸಹ- ಸಂಪಾದಕ ಬಿ.ಎ. ಶಂಷುದ್ದೀನ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಪತ್ರಕರ್ತ ಹಂಝ ಮಲಾರ್ ಪುಸ್ತಕ ಪರಿಚಯ ಮಾಡಲಿದ್ದು, ಅಕಾಡೆಮಿಯ ಸದಸ್ಯ ಮುಹಮ್ಮದ್ ಶರೀಫ್ ನಿರ್ಮುಂಜೆ ಕಾರ್ಯಕ್ರಮದ ಸದಸ್ಯ ಸಂಚಾಲಕರಾಗಿ ಎಂದು ರಿಜಿಸ್ಟ್ರಾರ್ ಉಮರಬ್ಬ ತಿಳಿಸಿದ್ದಾರೆ.