ಮಡಿಕೇರಿ, ಮೇ 22: ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಆರ್.ಸೀತಾರಾಂ ಅವರು ತಾ. 24 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಸಚಿವರು ತಾ. 24 ರಂದು (ನಾಳೆ) ಬೆಳಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೊಡಗು ಜಿಲ್ಲೆಯ ಎಲ್ಲಾ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ನಂತರ ಮಧ್ಯಾಹ್ನ 1.30 ಗಂಟೆಗೆ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ 2014-15ನೇ ಸಾಲಿನ ಮಡಿಕೇರಿ ನಗರಸಭೆ ವತಿಯಿಂದ ವಿತರಿಸಲಾಗುವ ಕಸ ವಿಲೇವಾರಿ ವಾಹನಗಳನ್ನು ಸಾರ್ವಜನಿಕ ಸೇವೆಗೆ ಲೋಕಾರ್ಪಣೆ ಮಾಡಲಿದ್ದಾರೆ. ಮಡಿಕೇರಿ ನಗರಸಭೆ ವತಿಯಿಂದ ನಿರ್ವಹಿಸಲಾಗಿರುವ ಎಲ್ಲಾ ಕಾಮಗಾರಿಗಳಿಗೆ ಚಾಲನೆ ನೀಡುವದು (ಕಾಮಗಾರಿಗಳಿಗೆ ಕಾರ್ಯಾದೇಶ ನೀಡುವದು.) ನಗರಸಭೆ ವತಿಯಿಂದ ಆಯೋಜಿಸಿರುವ ‘ಸಾರ್ವಜನಿಕರು ವೈಜ್ಞಾನಿಕವಾಗಿ ಕಸ ವಿಲೇವಾರಿ’ ಮಾಡುವ ಬಗ್ಗೆ ಬೀದಿನಾಟಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.