ಕುಶಾಲನಗರ, ಮೇ 22: ಕುಶಾಲನಗರದ ವೀರಶೈವ ಸಮಾಜದ ಆಶ್ರಯದಲ್ಲಿ ತಾ. 29 ರಂದು ಶ್ರೀ ಬಸವೇಶ್ವರ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಮಾಜದ ಅಧ್ಯಕ್ಷ ಎಂ.ಎಸ್. ಶಿವಾನಂದ ತಿಳಿಸಿದ್ದಾರೆ.ಕುಶಾಲನಗರದಲ್ಲಿ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು, ಅರಮೇರಿ ಕಳಂಚೇರಿ ಮಠಾಧೀಶರಾದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಅವರ ಸಾನಿಧ್ಯದಲ್ಲಿ ಸ್ಥಳೀಯ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ಅಂದು ಸಂಜೆ 7 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದೆ. ಸಮಾಜದ ಅಧ್ಯಕ್ಷ ಎಂ.ಎಸ್. ಶಿವಾನಂದ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಬೇಳೂರು ಪ್ರೌಢಶಾಲೆಯ ಶಿಕ್ಷಕ ಕೆ.ಸಿ.ತಿಪ್ಪೇಸ್ವಾಮಿ ವಿಶೇಷ ಉಪನ್ಯಾಸ ನೀಡಲಿದ್ದಾರೆ ಎಂದು ತಿಳಿಸಿದರು. ಕಾರ್ಯಕ್ರಮದ ಅಂಗವಾಗಿ ಅಂದು ಸಂಜೆ 4 ಗಂಟೆಗೆ ಬೈಚನಹಳ್ಳಿಯ ಶ್ರೀ ಬಸವೇಶ್ವರ ದೇವಾಲಯದಿಂದ ರಥಬೀದಿಯ ಶ್ರೀ ಬಸವೇಶ್ವರ ದೇವಾಲಯದವರೆಗೆ ಬಸವೇಶ್ವರ ಮೂರ್ತಿಯ ಭಾವಚಿತ್ರದ ಮೆರವಣಿಗೆ ನಡೆಯಲಿದೆ ಎಂದು ಮಾಹಿತಿ ನೀಡಿದರು.

ಸಮಾಜದ ಸಂಚಾಲಕ ಹೆಚ್.ಎಂ. ಮಧುಸೂದನ್ ಮಾತನಾಡಿ, ಕಾರ್ಯಕ್ರಮದ ಅಂಗವಾಗಿ ಸಮಾಜ ಬಾಂಧವರಿಗೆ ತಾ.23 ರಂದು (ಇಂದು) ಸ್ಥಳೀಯ ಸರಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಕ್ರೀಡಾಕೂಟ ಹಮ್ಮಿಕೊಳ್ಳಲಾಗಿದೆ. ವಿವಿಧ ಪಂದ್ಯಾಟಗಳು ನಡೆಯಲಿವೆ ಎಂದು ತಿಳಿಸಿದರು. ಗೋಷ್ಠಿಯಲ್ಲಿ ಸಮಾಜದ ಗೌರವಾಧ್ಯಕ್ಷ ಬಿ.ಬಿ. ಲೋಕೇಶ್, ಉಪಾಧ್ಯಕ್ಷರಾದ ಎಂ.ಬಿ. ಸುರೇಶ್, ಪರಮೇಶ್, ಕಾರ್ಯದರ್ಶಿ ಎಸ್.ಎಸ್. ವಿರೂಪಾಕ್ಷ, ಸಂಘಟನಾ ಕಾರ್ಯದರ್ಶಿ ಶಿವಲಿಂಗ, ಸದಾಶಿವ ಇದ್ದರು.