ಮಡಿಕೇರಿ, ಮೇ 22: ಮಡಿಕೇರಿ ತಾಲೂಕು ಬಿಜೆಪಿ ಸಭೆಯನ್ನು ತಾ. 26 ರಂದು ಪೂರ್ವಾಹ್ನ 11 ಗಂಟೆಗೆ ನಗರದ ಬಾಲಭವನದಲ್ಲಿ ತಾಲೂಕು ಅಧ್ಯಕ್ಷ ತಳೂರು ಕಿಶೋರ್‍ಕುಮಾರ್ ಅಧ್ಯಕ್ಷತೆಯಲ್ಲಿ ನಡೆಯಲಿದೆ.ಸಭೆಯಲ್ಲಿ ಶಾಸಕರಾದ ಕೆ.ಜಿ. ಬೋಪಯ್ಯ, ಎಂ.ಪಿ. ಅಪ್ಪಚ್ಚುರಂಜನ್, ಎಂ.ಪಿ. ಸುನಿಲ್ ಸುಬ್ರಮಣಿ, ರಾಜ್ಯ ಕಾರ್ಯದರ್ಶಿ ಎ.ಕೆ. ಮನುಮುತ್ತಪ್ಪ, ಜಿಲ್ಲಾ ಪಂಚಾಯತ್ ಅಧ್ಯಕ್ಷ ಬಿ.ಎ. ಹರೀಶ್ ಹಾಗೂ ಜಿಲ್ಲಾ ಬಿಜೆಪಿ ಅಧ್ಯಕ್ಷ ಬಿ.ಬಿ. ಭಾರತೀಶ್ ಭಾಗವಹಿಸಲಿದ್ದಾರೆ. ಸಭೆಯಲ್ಲಿ ಜಿ. ಪಂ., ತಾ.ಪಂ., ಗ್ರಾ.ಪಂ. ಅಧ್ಯಕ್ಷರು, ಸದಸ್ಯರು ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಲಿದ್ದಾರೆ.