ಸೋಮವಾರಪೇಟೆ, ಮೇ 22: ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಜೂನ್ 5ರಂದು ಇಲ್ಲಿನ ಒಕ್ಕಲಿಗರ ಸಮುದಾಯ ಭವನದಲ್ಲಿ ನಡೆಸಲು ಉದ್ದೇಶಿಸಿರುವ ಕನ್ನಡ ಸಾಹಿತ್ಯ ಸಮ್ಮೆಳನದ ಲಾಂಛನವನ್ನು ಶಾಸಕ ಅಪ್ಪಚ್ಚು ರಂಜನ್ ಅನಾವರಣ ಗೊಳಿಸಿದರು.ಕನ್ನಡ ಸಾಹಿತ್ಯ ಭವನದಲ್ಲಿ ನೂತನ ಲಾಂಛನವನ್ನು ಬಿಡುಗಡೆ ಮಾಡಿದ ಶಾಸಕರು, ಕನ್ನಡ ಸಾಹಿತ್ಯ ಸಮ್ಮೆಳನದ ಯಶಸ್ಸಿಗೆ ಸದಸ್ಯರು, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಕೈ ಜೋಡಿಸಬೇಕೆಂದು ಮನವಿ ಮಾಡಿದರು. ಸಮ್ಮೇಳನದ ಎಲ್ಲ ಘಟಕಗಳ ಪದಾಧಿಕಾರಿಗಳು ಸೂಕ್ತ ರೀತಿಯಲ್ಲಿ ತಮ್ಮ ಜವಾಬ್ದಾರಿಯನ್ನು ನಿಭಾಯಿಸುವ ಮೂಲಕ ಸಮ್ಮೇಳನವನ್ನು ಯಶಸ್ವಿ ಗೊಳಿಸ ಬೇಕೆಂದು ಮನವಿ ಮಾಡಿದರು. ಈ ಸಂದರ್ಭ ತಾಲೂಕು ಕನ್ನಡ ಸಾಹಿತ್ಯ ಪರಿಷತ್‍ನ ಅಧ್ಯಕ್ಷ ಎಚ್.ಜೆ. ಜವರಪ್ಪ, ಕಾರ್ಯದರ್ಶಿ ಎಸ್.ಡಿ. ವಿಜೇತ್, ವಿವಿಧ ಘಟಕಗಳ ಪದಾಧಿಕಾರಿಗಳಾಗಿ ಎ.ಎಸ್. ಮಲ್ಲೇಶ್, ಡಿಸಿಲ್ವ, ಸೋಮೇಶ್, ತಂಗಮ್ಮ, ವಿ.ಎಂ. ವಿಜಯ, ಬಿಎಸ್. ಸುಂದರ್, ಜಲಜಾ ಶೇಖರ್ ಮತ್ತಿತರರು ಪಾಲ್ಗೊಂಡಿದ್ದರು.