ವೀರಾಜಪೇಟೆ, ಮೇ 25: ವೀರಾಜಪೇಟೆ ತಾಲೂಕು ತಹಶೀಲ್ದಾರ್ ಆಗಿ ಬೆಂಗಳೂರು ಬಿಎಂಟಿಸಿಯಲ್ಲಿ ಸೇವೆ ಸಲ್ಲಿಸುತ್ತಿದ್ದ ಗೋವಿಂದರಾಜ್ ಅವರು ತಾ. 23ರಂದು ಅಧಿಕಾರ ಸ್ವೀಕರಿಸಿದ್ದಾರೆ.ಈ ಹಿಂದೆ ಇಲ್ಲಿನ ತಾಲೂಕು ಕಚೇರಿಯಲ್ಲಿ ತಹಶೀಲ್ದಾರ್ ಆಗಿದ್ದ ಮಹಾದೇವ ಸ್ವಾಮಿ ಅವರು ಮೈಸೂರಿಗೆ ವರ್ಗವಾಗಿದ್ದರಿಂದ ಈ ಸ್ಥಾನ ತೆರವಾಗಿತ್ತು.