ಮಡಿಕೇರಿ, ಮೇ 25: ದೇಚೂರು ಶ್ರೀರಾಮ ವಿದ್ಯಾಗಣಪತಿ ದೇವಸ್ಥಾನದ 19ನೇ ವಾರ್ಷಿಕೋತ್ಸವ ತಾ. 27 ರಂದು (ನಾಳೆ) ನಡೆಯಲಿದೆ.ಬೆಳಿಗ್ಗೆ 6 ಗಂಟೆಗೆ ನಗರ ಸಂಕೀರ್ತನೆ, 8.30ಕ್ಕೆ ನಿರ್ಮಾಲ್ಯ, ಪುಣ್ಯಾಹ ವಾಚನ, 9ಕ್ಕೆ ದೇವತಾ ಪ್ರಾರ್ಥನೆ, ಮಹಾಗಣಪತಿ ಮೂರ್ತಿಗೆ ಅಭಿಷೇಕ, ಬಯಲು ಆಂಜನೇಯ ಪೂಜೆ, ಅಷ್ಠದ್ರವ್ಯ ಮಹಾಗಣಪತಿ ಮತ್ತು ನವಗ್ರಹ ಹೋಮ, ನವಗ್ರಹ ಮತ್ತು ನಾಗಪೂಜೆ, ಮಧ್ಯಾಹ್ನ 12.30ಕ್ಕೆ ಮಹಾಪೂಜೆ ಬಳಿಕ ಅನ್ನ ಸಂತರ್ಪಣೆ ಜರುಗಲಿದೆ ಎಂದು ದೇವಾಲಯ ಸಮಿತಿ ತಿಳಿಸಿದೆ.