ಮಡಿಕೇರಿ, ಮೇ 30: ರಾಜ್ಯ ಸರಕಾರದ ನಾಲ್ಕು ವರ್ಷದ ಸಾಧನೆಯನ್ನು ಜಿಲ್ಲೆಯ ಜನತೆಗೆ ತಿಳಿಯಪಡಿಸುವ ನಿಟ್ಟಿನಲ್ಲಿ ಐಎನ್‍ಟಿಯುಸಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಬೈಕ್ ರ್ಯಾಲಿ ಇಂದು ಸಂಜೆ ಇಲ್ಲಿನ ಗಾಂಧಿ ಮೈದಾನದಲ್ಲಿ ಸಮಾಪನಗೊಂಡಿತು. ಸುಂಟಿಕೊಪ್ಪ ಮಾರ್ಗವಾಗಿ ಮಡಿಕೇರಿಗೆ ಆಗಮಿಸಿದ ರ್ಯಾಲಿ ನಗರದ ಮುಖ್ಯ ರಸ್ತೆಗಳಲ್ಲಿ ಸಂಚರಿಸಿ ಗಾಂಧಿ ಮೈದಾನದಲ್ಲಿ ಸಮಾವೇಶ ಗೊಂಡಿತು. ಐಎನ್‍ಟಿಯುಸಿ ರಾಜ್ಯ ಉಪಾಧ್ಯಕ್ಷ ನಾಪಂಡ ಮುತ್ತಪ್ಪ ಸರಕಾರದ ಸಾಧನೆಗಳ ಬಗ್ಗೆ ಮಾತನಾಡಿದರು.