ಸೋಮವಾರಪೇಟೆ, ಜೂ. 1: ಸೋಮವಾರಪೇಟೆ ತಾಲೂಕು ಭಾರತೀಯ ಜನತಾ ಪಾರ್ಟಿಯ ಕಾರ್ಯಕಾರಿಣಿ ಸಭೆ ತಾ. 2ರಂದು (ಇಂದು) ಶಾಂತಳ್ಳಿ ಶ್ರೀಕುಮಾರಲಿಂಗೇಶ್ವರ ಸಮುದಾಯ ಭವನದಲ್ಲಿ ನಡೆಯಲಿದೆ ಎಂದು ಪಕ್ಷದ ವಕ್ತಾರ ಕೆ.ಜಿ. ಸುರೇಶ್ ತಿಳಿಸಿದ್ದಾರೆ.

ತಾ.2ರಂದು (ಇಂದು) ಬೆಳಿಗ್ಗೆ 10.30ಕ್ಕೆ ನಡೆಯಲಿರುವ ಸಭೆಯ ಅಧ್ಯಕ್ಷತೆಯನ್ನು ತಾಲೂಕು ಅಧ್ಯಕ್ಷ ಕೊಮಾರಪ್ಪ ವಹಿಸಲಿದ್ದು, ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಸೇರಿದಂತೆ ಪಕ್ಷದ ಇತರ ಮುಖಂಡರು ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.