ಮಡಿಕೇರಿ, ಜೂ. 3: ಮಡಿಕೇರಿ ವಿದ್ಯುತ್ ಉಪಕೇಂದ್ರದಲ್ಲಿ ತುರ್ತು ನಿರ್ವಹಣೆ ಮತ್ತು ದುರಸ್ತಿ ಕಾರ್ಯವನ್ನು ನಿರ್ವಹಿಸಬೇಕಾಗುವದರಿಂದ ತಾ. 4 ರಂದು (ಇಂದು) ಬೆಳಿಗ್ಗೆ 11 ಗಂಟೆಯಿಂದ ಸಂಜೆ 3 ರವರೆಗೆ ಮಡಿಕೇರಿ ವಿದ್ಯುತ್ ಉಪಕೇಂದ್ರದಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವದು. ಆದ್ದರಿಂದ ಮಡಿಕೇರಿ ಪಟ್ಟಣ, ಹೆಬ್ಬೆಟ್ಟಗೇರಿ, ಬೋಯಿಕೇರಿ, ಮಕ್ಕಂದೂರು, ಮೂರನೇ ಮೈಲು, ಕರ್ಣಂಗೇರಿ, ಮುಕ್ಕೋಡ್ಲು, ಆವಂಡಿ, ಹಮ್ಮಿಯಾಲ, ಮೇಕೇರಿ, ಕಡಗದಾಳು, ಕಗ್ಗೋಡ್ಲು, ಅರುವತೋಕ್ಲು, ಹಾಕತ್ತೂರು, ಭಾಗಮಂಡಲ, ಬೆಟ್ಟಗೇರಿ, ಮದೆನಾಡು, ಬೆಟ್ಟತ್ತೂರು, ಚೇರಂಬಾಣೆ, ಚೆಟ್ಟಿಮಾನಿ, ಐಯ್ಯಂಗೇರಿ, ಪಾಲೂರು, ಕುಂಡಾಮೇಸ್ತ್ರಿ ಕೂಟುಹೊಳೆ, ಸಂಪಾಜೆ, ಗಾಳಿಬೀಡು ಕಾಲೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ಇರುವದಿಲ್ಲ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ಸೆಸ್ಕ್ ವಿಭಾಗ ಕಾರ್ಯನಿರ್ವಾಹಕ ಇಂಜಿನಿಯರ್ ಕೋರಿದ್ದಾರೆ.

* ಮಡಿಕೇರಿ, ಜೂ. 3: ವಿದ್ಯುತ್ ವಿತರಣಾ ಕೇಂದ್ರ ಮತ್ತು ಮಾರ್ಗದಲ್ಲಿ ತುರ್ತು ನಿರ್ವಹಣೆ ಹಾಗೂ ದುರಸ್ತಿ ಕಾರ್ಯವನ್ನು ನಿರ್ವಹಿಸಬೇಕಾಗುವದರಿಂದ ಕ.ವಿ.ಪ್ರ.ನಿ.ನಿ. ಅವರ ಕೋರಿಕೆಯಂತೆ ತಾ. 5 ರಂದು (ನಾಳೆ) ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ, ವೀರಾಜಪೇಟೆ-ಸಿದ್ದಾಪುರ ಹಾಗೂ ಮೂರ್ನಾಡು ವಿದ್ಯುತ್ ಉಪಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವದು. ಆದ್ದರಿಂದ ವೀರಾಜಪೇಟೆ, ಬಿ. ಶೆಟ್ಟಗೇರಿ, ಬೇತ್ರಿ, ಕಡಂಗಮರೂರು, ಕಾಕೋಟುಪರಂಬು, ಅಮ್ಮತ್ತಿ, ಸಿದ್ದಾಪುರ, ಮಾಲ್ದಾರೆ, ನೆಲ್ಲಿಹುದಿಕೇರಿ, ಮೂರ್ನಾಡು, ಮರಗೋಡು, ನಾಪೋಕ್ಲು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ಸೆಸ್ಕ್ ವಿಭಾಗ ಕಾರ್ಯನಿರ್ವಾಹಕ ಇಂಜಿನಿಯರ್ ಕೋರಿದ್ದಾರೆ.