ಮಡಿಕೇರಿ, ಜೂ. 4: ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ (ನಬಾರ್ಡ್), ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಇವರ ಸಂಯುಕ್ತಾಶ್ರಯದಲ್ಲಿ ತಾ. 5 ರಿಂದ (ಇಂದಿನಿಂದ) 9 ರವರೆಗೆ ಆರ್ಥಿಕ ಸಾಕ್ಷರತಾ ಸಪ್ತಾಹ ಕಾರ್ಯಕ್ರಮ ನಡೆಯಲಿದೆ.

ಬೆಳಗ್ಗೆ 10 ಗಂಟೆಗೆ ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿ. ಕೇಂದ್ರ ಕಚೇರಿ ಮಡಿಕೇರಿಯಲ್ಲಿ, ಮಧ್ಯಾಹ್ನ 2 ಗಂಟೆಗೆ ಮೂರ್ನಾಡು, ತಾ. 6ರಂದು ಬೆಳಗ್ಗೆ 10 ಗಂಟೆಗೆ ಪೊನ್ನಂಪೇಟೆ, ಮಧ್ಯಾಹ್ನ 2 ಗಂಟೆಗೆ ಕುಟ್ಟ, ತಾ. 7 ರಂದು ಬೆಳಗ್ಗೆ 10 ಗಂಟೆಗೆ ವೀರಾಜಪೇಟೆ, ಮಧ್ಯಾಹ್ನ 2 ಗಂಟೆಗೆ ಕುಶಾಲನಗರ, ತಾ. 8 ರಂದು ಪಾಲಿಬೆಟ್ಟ, ಮಧ್ಯಾಹ್ನ 2 ಗಂಟೆಗೆ ಸಿದ್ದಾಪುರ, ತಾ. 9 ರಂದು ಶನಿವಾರಸಂತೆ, ಮಧ್ಯಾಹ್ನ 2 ಗಂಟೆಗೆ ಸೋಮವಾರಪೇಟೆ ಶಾಖೆಗಳಲ್ಲಿ ಆರ್ಥಿಕ ಸಾಕ್ಷರತಾ ಸಪ್ತಾಹ ಕಾರ್ಯಕ್ರಮ ನಡೆಯಲಿದೆ.

ಆರ್ಥಿಕ ಸಾಕ್ಷರತಾ ಸಪ್ತಾಹ ಕಾರ್ಯಕ್ರಮಕ್ಕೆ ಸಂಬಂಧಿಸಿದ ಸ್ಥಳೀಯ ಎಲ್ಲಾ ಗ್ರಾಹಕರು ಹಾಗೂ ಸಾರ್ವಜನಿಕರು ಹಾಜರಾಗುವಂತೆ ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕು ನಿಯಮಿತದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅವರು ತಿಳಿಸಿದ್ದಾರೆ.