ಮಡಿಕೇರಿ, ಜೂ. 8: ನೆಹರೂ ಯುವ ಕೇಂದ್ರ, ಕೊಡಗು ಜಿಲ್ಲಾ ಯುವ ಒಕ್ಕೂಟ ಹಾಗೂ ಮಡಿಕೇರಿ ತಾಲೂಕು ಯುವ ಒಕ್ಕೂಟ ವತಿಯಿಂದ ನಗರದಲ್ಲಿ ತಾ. 9 ರಂದು (ಇಂದು) ಸ್ವಚ್ಛ ಭಾರತ ಅಭಿಯಾನವನ್ನು ಹಮ್ಮಿಕೊಂಡಿರುವದಾಗಿ ತಾಲೂಕು ಯುವ ಒಕ್ಕೂಟದ ಅಧ್ಯಕ್ಷ ನವೀನ್ ದೇರಳ ತಿಳಿಸಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ ಅವರು ಮಧ್ಯಾಹ್ನ 12 ಗಂಟೆಯಿಂದ 1.30 ಗಂಟೆಯವರೆಗೆ ನಗರದ ಗಾಂಧಿ ಮೈದಾನದ ಸುತ್ತಮುತ್ತ, ಪ್ರವಾಸಿ ತಾಣ ರಾಜಾಸೀಟು ಹಾಗೂ ಪುಟಾಣಿ ರೈಲು ಭಾಗದಲ್ಲಿ ಸ್ವಚ್ಛತಾ ಕಾರ್ಯ ನಡೆಸಲಾಗುವದು. ಎಲ್ಲಾ ಯುವ ಒಕ್ಕೂಟಗಳ ಪದಾಧಿಕಾರಿಗಳು ಮತ್ತು ಸದಸ್ಯರು ಅಭಿಯಾನದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.