ಸೋಮವಾರಪೇಟೆ, ಜೂ. 8: ಇಲ್ಲಿನ ಕುರುಹಿನ ಶೆಟ್ಟಿ ಸಮಾಜದ ವತಿಯಿಂದ ಹಾಕಿ ಕ್ರೀಡೆಯಲ್ಲಿ ಉದಯೋನ್ಮುಖ ಆಟಗಾರರಾಗಿ ಗುರುತಿಸಿಕೊಂಡಿರುವ ಈರ್ವರು ಕ್ರೀಡಾಪ್ರತಿಭೆಗಳನ್ನು ಸನ್ಮಾನಿಸಲಾಯಿತು.

ಇಲ್ಲಿನ ರಾಮಮಂದಿರದಲ್ಲಿ ಅಧ್ಯಕ್ಷ ರಾಮಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾಜದ ವಾರ್ಷಿಕ ಮಹಾಸಭೆಯಲ್ಲಿ ಕ್ರೀಡಾಕ್ಷೇತ್ರದಲ್ಲಿನ ಸಾಧನೆಗಾಗಿ ನಗರದ ಮೋಹನ್ ಮತ್ತು ಶೋಭಾ ದಂಪತಿ ಪುತ್ರ, ಪೊನ್ನಂಪೇಟೆ ಕ್ರೀಡಾಶಾಲೆಯ ವಿದ್ಯಾರ್ಥಿ ಸೂರ್ಯ ಮತ್ತು ಮಲ್ಲಣ್ಣ ಅವರ ಪುತ್ರ ಲಿಖಿತ್ ಅವರುಗಳನ್ನು ಸನ್ಮಾನಿಸಲಾಯಿತು. ಸಮಾಜದ ಪ್ರಮುಖರಾದ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಅಧ್ಯಕ್ಷ ಬಿ.ಡಿ. ಮಂಜುನಾಥ್, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ವಿಜಯಲಕ್ಷ್ಮೀ ಸುರೇಶ್, ಸಂಘದ ಉಪಾಧ್ಯಕ್ಷ ಬಿ.ಬಿ.ಮೋಹನ್, ಕಾರ್ಯದರ್ಶಿ ಬಿ.ಎನ್.ಮಂಜುನಾಥ್ ಪದಾಧಿಕಾರಿಗಳಾದ ಕೆ.ಎನ್.ಮಂಜುನಾಥ್, ಬಿ.ಸಿ.ರೇವಣ್ಣ, ಎನ್.ಎನ್. ರಮೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದು, ಸನ್ಮಾನಿಸಿದರು.