ಮಡಿಕೇರಿ, ಜೂ. 8: ಕೊಡಗು ಜಿಲ್ಲಾ ಯುವ ಕಾಂಗ್ರೆಸ್‍ನ ಪದಾಧಿಕಾರಿಗಳ ಸಭೆ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾಧ್ಯಕ್ಷ ಹನೀಫ್ ನೇತೃತ್ವದಲ್ಲಿ ನಡೆಯಿತು.

ಯುವ ಕಾಂಗ್ರೆಸ್ ವಲಯ ಹಾಗೂ ಬೂತ್ ಮಟ್ಟದ ಸಮಿತಿ ರಚಿಸುವ ಬಗ್ಗೆ ಚರ್ಚಿಸಲಾಯಿತು. ಮುಂಬರುವ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಯ ಘೋಷಣೆ ವಿಳಂಬವಾಗದೆ ಪ್ರಕಟಿಸಬೇಕೆಂದು ಕೆ.ಪಿ.ಸಿ.ಸಿ. ಯುವ ಕಾಂಗ್ರೆಸ್ ರಾಜ್ಯ ಸಮಿತಿ, ರಾಜ್ಯ ಉಸ್ತುವಾರಿ ವೇಣುಗೋಪಾಲ್, ಜಿಲ್ಲಾ ಸಮಿತಿ ಸೇರಿದಂತೆ ರಾಜ್ಯ ಸಮಿತಿಗೆ ಮನವಿ ನೀಡಲು ತೀರ್ಮಾನಿಸಲಾಯಿತು.

ಸಭೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೆಜಿತ್ ಕುಮಾರ್ ಗುಹ್ಯ, ಶಾಫಿ, ಹೂವಯ್ಯ, ಮುರುಗ, ವೀರಾಜಪೇಟೆ ಕ್ಷೇತ್ರದ ಅಧ್ಯಕ್ಷ ಜಮ್ಮಡ ಸೋಮಣ್ಣ, ಕಾರ್ಯದರ್ಶಿ ಅಂದ್ರಮಾನ್, ಮಡಿಕೇರಿ ಕ್ಷೇತ್ರದ ಅಧ್ಯಕ್ಷ ಮಿಥುನ್, ಗೋಣಿಕೊಪ್ಪಲು ನಗರ ಉಪಾಧ್ಯಕ್ಷ ಸರ್ಫುದ್ದೀನ್, ಸಂಪಾಜೆಯ ರಾಘವೇಂದ್ರ ಸೇರಿದಂತೆ ಇನ್ನಿತರರು ಇದ್ದರು.