*ಸಿದ್ದಾಪುರ, ಜೂ. 8: ಅಮೃತ ಮೊಗೇರ ಯುವ ಸೇವಾ ಸಮಾಜದ ವತಿಯಿಂದ ನೋಟ್ ಪುಸ್ತಕ ವಿತರಣೆ ಕಾರ್ಯಕ್ರಮ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು. ಜಿಲ್ಲೆಯಲ್ಲಿರುವ ಸಮಾಜ ಬಾಂಧÀವರ 200ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಜಿಲ್ಲಾ ಪಂಚಾಯಿತಿ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಮೂಕೊಂಡ ವಿಜು ಸುಬ್ರಮಣಿ ನೋಟ್ ಪುಸ್ತಕ ವಿತರಣೆ ಮಾಡಿದರು. ನಂತರ ಮಾತನಾಡಿ, ಜಿಲ್ಲೆಯಲ್ಲಿರುವ ಮೊಗೇರ ಸಮಾಜದವರು ತಮ್ಮ ಮಕ್ಕಳಿಗೆ ಹೆಚ್ಚಿನ ವಿದ್ಯಾಭ್ಯಾಸಕ್ಕೆ ಸಹಕಾರ ನೀಡುವ ಮೂಲಕ ಪ್ರತಿಭಾವಂತರಾಗಿ ಸಮಾಜದಲ್ಲಿ ಉನ್ನತ ಹುದ್ದೆಯೊಂದಿಗೆ ಮುಖ್ಯವಾಹಿನಿಗೆ ಬರಬೇಕೆಂದು ಕರೆ ನೀಡಿದರು. ಅಮೃತ ಮೊಗೇರ ಯುವ ಸೇವಾ ಸಮಾಜದ ಅಧ್ಯಕ್ಷ ಪಿ.ಎಂ. ರಘು ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೊಗೇರ ಸಮಾಜದ ಜಿಲ್ಲಾಧ್ಯಕ್ಷ ಬಿ. ಶಿವಪ್ಪ, ಗೌರವ ಅಧ್ಯಕ್ಷ ಪಿ.ಎಂ. ರವಿ, ತುಳುವೆರ ಕೂಟದ ಜಿಲ್ಲಾಧ್ಯಕ್ಷ ಶೇಖರ್ ಭಂಡಾರಿ, ಅಮೃತ ಸೇವಾ ಸಮಾಜದ ಗೌರವ ಅಧ್ಯಕ್ಷ ಎಂ.ಜಿ. ಚಂದ್ರು, ರಾಜ್ಯ ಕಾರ್ಯದರ್ಶಿ ಪಿ.ಕೆ ಮಂಜು, ಸದಸ್ಯ ಪಿ.ಸಿ. ರಾಜು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು