ಸಿದ್ದಾಪುರ, ಜೂ. 8: ಸಿದ್ದಾಪುರ ಸೇರಿದಂತೆ ಜಿಲ್ಲೆಯಲ್ಲಿ ನಿರಂತರವಾಗಿ ವಿದ್ಯುತ್ ಕಡಿತಗೊಂಡು ಸಮಸ್ಯೆ ಎದುರಾಗುತ್ತಿದ್ದು, ಈ ಹಿನೆÀ್ನಲೆಯಲ್ಲಿ ವಿದ್ಯುತ್ ಕಡಿತದ ಸಮಸ್ಯೆಯನ್ನು ಪರಿಹರಿಸಬೇಕೆಂದು ಜಿಲ್ಲೆಯ ಯುವ ಕಾಂಗ್ರೆಸ್, ರಾಜ್ಯ ಇಂಧನ ಸಚಿವ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿದರು.

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೆಜಿತ್ ಕುಮಾರ್ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಇಂಧನ ಸಚಿವರನ್ನು ಭೇಟಿಯಾದ ಯುವ ಕಾಂಗ್ರೆಸ್ ತಂಡ, ಕೊಡಗು ಜಿಲ್ಲೆಯಲ್ಲಿ ಆಗುತ್ತಿರುವ ವಿದ್ಯುತ್ ಅಭಾವದ ಬಗ್ಗೆ ಸಚಿವರಿಗೆ ಮಾಹಿತಿ ನೀಡಿದರು. ಜಿಲ್ಲೆಯಲ್ಲಿ ನಿರಂತರ ವಿದ್ಯುತ್ ಸಮಸ್ಯೆ ಎದುರಾಗಿದ್ದು, ಈಗಾಗಲೇ ಪವಿತ್ರ ರಂಜಾನ್ ತಿಂಗಳು ಆರಂಭವಾಗಿದ್ದು, ಈ ಹಿನೆÀ್ನಲೆಯಲ್ಲಿ ಬೆಳಗ್ಗಿನ ಜಾವ ಹಾಗೂ ಸಂಜೆ ಆಹಾರ ತಯಾರಿಸಲು ಹಾಗೂ ಮಸೀದಿಗೆ ತೆರಳಲು ತೀವ್ರ ತೊಂದರೆಯುಂಟಾಗುತ್ತಿದ್ದು, ಸಮಸ್ಯೆಯನ್ನು ಕೂಡಲೇ ಬಗೆಹರಿಸಬೇಕೆಂದು ಮನವಿ ಸಲ್ಲಿಸಿದರು.

ಮನವಿಯನ್ನು ಸ್ವೀಕರಿಸಿ ಮಾತನಾಡಿದ ಸಚಿವ ಡಿ.ಕೆ. ಶಿವಕುಮಾರ್, ಜಿಲ್ಲೆಯ ವಿದ್ಯುತ್ ಸಮಸ್ಯೆಯನ್ನು ಕೂಡಲೇ ಸರಿಪಡಿಸಲಾಗುವದು. ಈ ಬಗ್ಗೆ ಜಿಲ್ಲಾ ವಿದ್ಯುತ್ ಇ.ಇ ಅವರಿಗೆ ಸೂಚನೆ ನೀಡಲಾಗುವದೆಂದರು. ಈ ಸಂದರ್ಭ ಯುವ ಕಾಂಗ್ರೆಸ್ ಮುಖಂಡರಾದ ನವೀದ್ ಖಾನ್, ಕೆ.ಪಿ. ಸಿದ್ದಿಕ್ ಹಾಜರಿದ್ದರು.