ಗುಡ್ಡೆಹೊಸೂರು, ಜೂ. 13 : ಇಲ್ಲಿನ ಸರಕಾರಿ ಪ್ರಾಥಮಿಕ ಶಾಲೆ ಮತ್ತು ಗುಡ್ಡೆಹೊಸೂರಿನ ಗ್ರಾಮ ಪಂಚಾಯಿತಿ ಸಂಯುಕ್ತ ಆಶ್ರಯದಲ್ಲಿ ಶಾಲಾ ದಾಖಲಾತಿ ಆಂದೋಲನ ಕಾರ್ಯಕ್ರಮ ನಡೆಯಿತು. ಮಕ್ಕಳನ್ನು ಶಾಲೆಗೆ ಸೇರಿಸುವ ಸಲುವಾಗಿ ಗ್ರಾಮದಲ್ಲಿ ಮೆರವಣಿಗೆ ನಡೆಸಲಾಯಿತು. ಈ ಸಂದರ್ಭ ಗ್ರಾ.ಪಂ. ಅಧ್ಯಕ್ಷೆ ಭಾರತಿ ಮತ್ತು ತಾ.ಪಂ. ಸದಸ್ಯೆ ಪುಷ್ಪ ಜನಾರ್ಧನ್, ಶಿಕ್ಷಣ ಇಲಾಖೆಯ ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ಮಾಲತಿ, ನಂಜರಾಯಪಟ್ಟಣ ಕ್ಲಸ್ಟರ್‍ನ ಸಿ.ಆರ್.ಪಿ. ಸತ್ಯನಾರಾಯಣ ಶಿಕ್ಷಕ ವೃಂದ ಎಸ್.ಡಿ.ಎಂ.ಸಿ. ಅಧ್ಯಕ್ಷ ಬಿ.ಎಸ್. ದಿನೇಶ್ ಮತ್ತು ಸದಸ್ಯರು ಹಾಗೂ ಗುಡ್ಡೆಹೊಸೂರು ಗ್ರಾ.ಪಂ. ವ್ಯಾಪ್ತಿಯ ಎಲ್ಲಾ ಶಾಲೆಗಳ ಸಹಶಿಕ್ಷಕರು ಹಾಜರಿದ್ದರು