ಸೋಮವಾರಪೇಟೆ, ಜೂ. 14: ಕಾಜೂರು ಕ್ಲಸ್ಟರ್ ವ್ಯಾಪ್ತಿಯ ಬಳಗುಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಬೇಳೂರು ಗ್ರಾಮ ಪಂಚಾಯಿತಿ ಆಶ್ರಯದಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಾಲೆಗೆ ನೋಂದಾಯಿಸಿಕೊಳ್ಳುವ ಶಾಲಾ ವಿಶೇಷ ದಾಖಲಾತಿ ಆಂದೋಲನ ಜಾಥಾ ಬೇಳೂರು ಗ್ರಾ.ಪಂ.ನ ಬಜೆಗುಂಡಿಯಲ್ಲಿ ನಡೆಯಿತು.

ಮಕ್ಕಳನ್ನು ಶಾಲೆಗೆ ದಾಖಲಿಸುವಂತೆ ಪೋಷಕರನ್ನು ಪ್ರೇರೇಪಿಸುವ ಘೋಷಣೆಗಳನ್ನು ಕೂಗುತ್ತಾ ಬಳಗುಂದ, ಬಜೆಗುಂಡಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು. ಈ ಸಂದರ್ಭ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಚನ್ನಕೇಶವ, ಶಿಕ್ಷಣ ಇಲಾಖೆಯ ಶಿಕ್ಷಣ ಸಂಯೋಜಕ ವಸಂತ್, ಸಿಆರ್‍ಪಿ ಅಶೋಕ್‍ಕುಮಾರ್, ಶಾಲಾ ಮುಖ್ಯ ಶಿಕ್ಷಕಿ ಭಾಗ್ಯ, ದೈಹಿಕ ಶಿಕ್ಷಣ ಶಿಕ್ಷಕ ರಮೇಶ್, ಬೇಳೂರು ಗ್ರಾಪಂ ಸದಸ್ಯರುಗಳು ಹಾಗೂ ಶಾಲಾಭಿವೃದ್ಧಿ ಸಮಿತಿ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

ಜಾಥಾದ ನಂತರ ಶಾಲೆಯಲ್ಲಿ ಸಭೆ ಸೇರಿದ ಪ್ರಮುಖರು ಯೋಜನೆಯ ಯಶಸ್ಸಿಗಾಗಿ ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ಚರ್ಚಿಸಿದರು.