ಮಡಿಕೇರಿ, ಜೂ. 16: ದಕ್ಷಿಣ ಕೊಡಗಿನ ಬಾಡಗರಕೇರಿಯಲ್ಲಿರುವ ಶ್ರೀ ಮೃತ್ಯುಂಜಯ ದೇವಸ್ಥಾನ ಕ್ಷೇತ್ರದಲ್ಲಿನ ಶ್ರೀ ಮಹಾವಿಷ್ಣು ಗುಡಿಯ ಜೀರ್ಣೋದ್ಧಾರ ಕೆಲಸ ಪೂರ್ಣಗೊಂಡಿದೆ. ನವೀಕೃತ ಮಹಾವಿಷ್ಣು ಗುಡಿಯ ಪುನರ್‍ಪ್ರತಿಷ್ಠೆ ಹಾಗೂ ಬ್ರಹ್ಮಕಲಶ ಕೈಂಕರ್ಯ ತಾ. 17 ರಿಂದ (ಇಂದಿನಿಂದ) ತಾ. 19ರವರೆಗೆ ನಡೆಯಲಿದೆ. ಬ್ರಹ್ಮಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಪೂಜಾವಿಧಿ ವಿಧಾನಗಳು ಜರುಗಲಿದೆ. ತಾ. 17 ರಂದು ಸಂಜೆ 7 ಗಂಟೆಯಿಂದ ದೈವಿಕ ಕೈಂಕರ್ಯಗಳು ಆರಂಭಗೊಳ್ಳಲಿದೆ.

ತಾ. 19 ರಂದು ಬೆಳಿಗ್ಗೆ ಗಣಪತಿ ಹೋಮ, ತತ್ವಹೋಮ, ತತ್ವಕಲಶ ಪೂಜೆ, ಬೆ. 10.24ಕ್ಕೆ ಶ್ರೀ ಮಹಾವಿಷ್ಣು ದೇವರ ಪ್ರತಿಷ್ಠೆಯೊಂದಿಗೆ ಬ್ರಹ್ಮಕಲಶಾಭಿಷೇಕ, 12.30ಕ್ಕೆ ಮಹಾಪೂಜೆ ನಡೆಯಲಿದೆ. ಇದೇ ದಿನ ರಾತ್ರಿ 7 ಗಂಟೆಗೆ ಶ್ರೀ ವಿಷ್ಣು ದೇವರ ಅಲಂಕಾರ ಪೂಜೆ ನಿಗದಿಯಾಗಿರುವದಾಗಿ ಆಡಳಿತ ಮಂಡಳಿ ಪ್ರಕಟಣೆ ತಿಳಿಸಿದೆ.