ಮಡಿಕೇರಿ, ಜೂ. 16: ಮಡಿಕೇರಿ ತಾಲೂಕು 8ನೇ ಕನ್ನಡ ಸಾಹಿತ್ಯ ಸಮ್ಮೇಳನವು ತಾ. 17 ರಂದು (ಇಂದು) ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ನಡೆಯಲಿದೆ. ಬೆಳಿಗ್ಗೆ 8 ಗಂಟೆಗೆ ಧ್ವಜಾರೋಹಣ, ನಂತರ ಬೆಳಿಗ್ಗೆ 8.30 ಗಂಟೆಗೆ ಮುಖ್ಯದ್ವಾರ ಉದ್ಘಾಟನೆ, ಬೆಳಿಗ್ಗೆ 9 ಗಂಟೆಗೆ ಕೋಟೆ ಆವರಣದಲ್ಲಿ ಸಮ್ಮೇಳನಾಧ್ಯಕ್ಷರ ಮೆರವಣಿಗೆಗೆ ಚಾಲನೆ, ಬೆಳಿಗ್ಗೆ 10 ಗಂಟೆಗೆ ಭಾರತೀಸುತ ಪುಸ್ತಕ ಮಳಿಗೆ ಉದ್ಘಾಟನೆ, ಬೆಳಿಗ್ಗೆ 10.15 ಗಂಟೆಗೆ ಸಭಾಂಗಣ ಉದ್ಘಾಟನೆ, ಬೆಳಿಗ್ಗೆ 10.30 ಗಂಟೆಗೆ ಅಂಬಾಳೆ ಸುಬ್ಬರಾವ್ ವೇದಿಕೆ ಉದ್ಘಾಟನೆ ಜರುಗಲಿದೆ.ಬೆಳಿಗ್ಗೆ 11 ಗಂಟೆಗೆ ಸಮಾರಂಭದ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಕನ್ನಡ ಸಾಹಿತ್ಯ ಪರಿಷತ್ ತಂಡದವರಿಂದ ನಾಡಗೀತೆ, ರೈತಗೀತೆ, ಬಳಿಕ ನಡೆಯುವ ಕಾರ್ಯಕ್ರಮವನ್ನು ಕ.ಸಾ.ಪ.

(ಮೊದಲ ಪುಟದಿಂದ) ಜಿಲ್ಲಾಧ್ಯಕ್ಷ ಬಿ.ಎಸ್. ಲೋಕೇಶ್ ಸಾಗರ್, ಶಾಸಕ ಎಂ.ಪಿ. ಅಪ್ಪಚ್ಚುರಂಜನ್, ಮಡಿಕೇರಿ ತಾಲೂಕು 7ನೇ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಡಾ. ಶ್ರೀಧರ್ ಹೆಗಡೆ, ಮಡಿಕೇರಿ ತಾಲೂಕು 8ನೇ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಬಿ.ಎ. ಷಂಶುದ್ದೀನ್ ಜಿ.ಪಂ. ಅಧ್ಯಕ್ಷ ಬಿ.ಎ. ಹರೀಶ್, ಶಾಸಕರಾದ ಕೆ.ಜಿ.ಬೋಪಯ್ಯ, ಸುನಿಲ್ ಸುಬ್ರಮಣಿ, ಶಾಂತೆಯಂಡ ವೀಣಾ ಅಚ್ಚಯ್ಯ, ಕ.ಸಾ.ಪ. ನಿಕಟಪೂರ್ವ ಅಧ್ಯಕ್ಷ ಟಿ.ಪಿ.ರಮೇಶ್ ಇತರರು ಪಾಲ್ಗೊಳ್ಳಲಿದ್ದಾರೆ.

ಮಧ್ಯಾಹ್ನ 12 ಗಂಟೆಗೆ ವಿಚಾರಗೋಷ್ಠಿ, ಮಧ್ಯಾಹ್ನ 1 ಗಂಟೆಗೆ ಕನ್ನಡ ಗೀತ ಗಾಯನ, ಮಧ್ಯಾಹ್ನ 2 ಗಂಟೆಗೆ ಕವಿಗೋಷ್ಠಿ, ಮಧ್ಯಾಹ್ನ 3.30 ಗಂಟೆಗೆ ಬಹಿರಂಗ ಅಧಿವೇಶನ, ಸಂಜೆ 4 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ.

ಸಮಾರೋಪ ಸಮಾರಂಭದಲ್ಲಿ ಕ.ಸಾ.ಪ.ಅಧ್ಯಕ್ಷ ಕುಡೆಕಲ್ ಸಂತೋಷ್, ಸಮ್ಮೇಳನಾಧ್ಯಕ್ಷ ಬಿ.ಎ. ಷಂಶುದ್ದೀನ್, ಕ.ಸಾ.ಪ. ಜಿಲ್ಲಾಧ್ಯಕ್ಷ ಬಿ.ಎಸ್.ಲೋಕೇಶ್ ಸಾಗರ್, ಶಾಸಕ ಎಂ.ಪಿ.ಅಪ್ಪಚ್ಚುರಂಜನ್, ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಕೊಲ್ಯದ ಗಿರೀಶ್, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಬಿದ್ದಾಟಂಡ ಎಸ್. ತಮ್ಮಯ್ಯ, ಇತರರು ಪಾಲ್ಗೊಳ್ಳಲಿದ್ದಾರೆ.