ನಾಪೋಕ್ಲು, ಜೂ. 21: ಮಾಹಿತಿ, ಪ್ರಚಾರ ಫಲಕದಲ್ಲಿ ಅಳವಡಿಸಲಾಗಿದ್ದ ರಾಜ್ಯದ ಮುಖ್ಯಮಂತ್ರಿಗಳ ಭಾವಚಿತ್ರಕ್ಕೆ ಸೆಗಣಿ ಎರಚಿ ಅವಮಾನ ಮಾಡಿರುವ ಘಟನೆ ನಡೆದಿದ್ದು, ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಇಲ್ಲಿನ ಕಚೇರಿ ಮೊಟ್ಟೆ ಬಳಿ ಇರುವ ಕಂದಾಯ ಇಲಾಖೆ ಕಚೇರಿ ಸನಿಹ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಅಳವಡಿಸಲಾಗಿರುವ ಪ್ರಚಾರ ಫಲಕದಲ್ಲಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಭಾವಚಿತ್ರಕ್ಕೆ ನಿನ್ನೆ ರಾತ್ರಿ ಕಿಡಿಗೇಡಿಗಳು ಸೆಗಣಿ ಎರಚಿದ್ದಾರೆ. ಇದನ್ನು ಖಂಡಿಸಿರುವ ಗ್ರಾ.ಪಂ. ಮಾಜಿ ಅಧ್ಯಕ್ಷ ಹ್ಯಾರಿಸ್ ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದು, ಕಿಡಿಗೇಡಿಗಳನ್ನು ಪತ್ತೆ ಹಚ್ಚಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ. - ದುಗ್ಗಳ