ಶನಿವಾರಸಂತೆ, ಜೂ. 23 : ಶನಿವಾರಸಂತೆ ಪೊಲೀಸ್ ಠಾಣೆಯ ಸಭಾಂಗಣದಲ್ಲಿ ರಂಜಾನ್ ಹಬ್ಬದ ಪ್ರಯುಕ್ತ ಕರೆಯಲಾದ ಪೂರ್ವಭಾವಿ ಶಾಂತಿ ಸಭೆಯ ಅಧ್ಯಕ್ಷತೆಯನ್ನು ಪೊಲೀಸ್ ಠಾಣಾಧಿಕಾರಿ ಹೆಚ್. ಎಂ. ಮರಿಸ್ವಾಮಿ ವಹಿಸಿದ್ದರು.

ಹಿಂದೂ ಮುಸ್ಲಿಂ ಎಂಬ ಭೇದ ಭಾವವಿಲ್ಲದೆ ಶಾಂತಿಯುತವಾಗಿ ಹಬ್ಬ ಆಚರಣೆ ಮಾಡುವಂತೆ, ಯಾವದೇ ವದಂತಿಗಳಿಗೆ ಕಿವಿಕೊಡಬಾರದು ಎಂದು ಠಾಣಾಧಿಕಾರಿ ಹೇಳಿದರು.

ಸಭೆಯಲ್ಲಿ ಶನಿವಾರಸಂತೆ ಜಾಮಿಯಾ ಮಸೀದಿ ಅಧ್ಯಕ್ಷ ಅಕ್ಮಲ್, ಗ್ರಾಮ ಪಂಚಾಯಿತಿ ಅಧ್ಯಕ್ಷ ಮಹಮದ್ ಗೌಸ್, ನಿಡ್ತ ಗ್ರಾ.ಪಂ. ಅಧ್ಯಕ್ಷ ಮುಸ್ತಾಫ, ದುಂಡಳ್ಳಿ ಗ್ರಾ. ಪಂ. ಅಧ್ಯಕ್ಷ ಸಿ.ಜೆ. ಗಿರೀಶ್, ಮುಸ್ಲಿಂ ಬಾಂಧವರಾದ ಸಾದಿಕ್, ಬಾಬು, ಸರ್ವರ್, ಬಿಜೆಪಿ ಯುವ ಮೋರ್ಚದ ಅನಿಲ್‍ಕುಮಾರ್, ದಲಿತ ಸಮಿತಿಯ ಕೂಡ್ಲೂರು ದೇವರಾಜು, ಈರಪ್ಪ, ಕರವೇ ಹೋಬಳಿ ಅಧ್ಯಕ್ಷ ಆನಂದ ಇತರರು ಉಪಸ್ಥಿತರಿದ್ದರು. ಪೊಲೀಸ್ ಸಿಬ್ಬಂದಿಗಳಾದ ವಿಶ್ವನಾಥ ಸ್ವಾಗತಿಸಿ, ಸಂತೋಷ್ ವಂದಿಸಿದರು.