ಮಡಿಕೇರಿ, ಜೂ. 24: ಜಿಲ್ಲಾ ಉಸ್ತುವಾರಿ ಸಚಿವ ಎಂ.ಆರ್. ಸೀತಾರಾಂ ಅವರು ಜಿಲ್ಲಾಸ್ಪತ್ರೆಯಲ್ಲಿ ವೃದ್ಧೆಗೆ ದಂತ ಅಳವಡಿಸುವ ಮೂಲಕ ದಂತಭಾಗ್ಯ ಯೋಜನೆಗೆ ಚಾಲನೆ ನೀಡಿದರು. ಕುಮಾರ್ ಆರ್ಗನೈಕ್ ಸಂಸ್ಥೆ ಮುಖ್ಯಸ್ಥರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಿದರು. ಇದಕ್ಕೂ ಮೊದಲು ತುರ್ತು ನಿಗಾ ಘಟಕ ಹಾಗೂ ರಕ್ತನಿಧಿ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದರು.

ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರಾದ ಮಹೀಂದ್ರ ಅವರು ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಚಟುವಟಿಕೆ ಸಂಬಂಧಿಸಿದಂತೆ ಮಾಹಿತಿ ನೀಡಿದರು. ಜಿಲ್ಲಾ ಸರ್ಜನ್ ಅಬ್ದುಲ್ ಅಜೀಜ್, ಡಾ. ಸದಾಶಿವಪ್ಪ ಇತರರು ಇದ್ದರು.