ಸೋಮವಾರಪೇಟೆ, ಜೂ. 28: ತಾಲೂಕು ಗೌಡ ಸೇನೆಯ ವತಿಯಿಂದ ನಾಡಪ್ರಭು ಕೆಂಪೇಗೌಡರ ಹುಟ್ಟುಹಬ್ಬದ ಅಂಗವಾಗಿ ಸಾರ್ವಜನಿಕರಿಗೆ ಸಿಹಿ ಹಂಚಲಾಯಿತು.

ಸೇನೆಯ ಪ್ರಮುಖರಾದ ಪಿ. ಮಧು ಅವರ ನೇತೃತ್ವದಲ್ಲಿ ಸೇನೆಯ ಪದಾಧಿಕಾರಿಗಳು ಪಟ್ಟಣದ ಬಸ್ ನಿಲ್ದಾಣಗಳಲ್ಲಿ ಹಾಗೂ ತಾಲೂಕು ಪಂಚಾಯಿತಿ ಆವರಣದಲ್ಲಿ ಸಿಹಿ ವಿತರಿಸಿದರು.

ಈ ಸಂದರ್ಭ ಮಾತನಾಡಿದ ಮಧು, ರಾಜ್ಯಾದ್ಯಂತ ನಾಡಪ್ರಭು ಕೆಂಪೇಗೌಡರ ಹುಟ್ಟುಹಬ್ಬವನ್ನು ಸರಕಾರ ಆಚರಿಸುತ್ತಿರುವದು ಉತ್ತಮವಾದ ಬೆಳವಣಿಗೆಯಾಗಿದೆ. ಕಳೆದ ಕೆಲವು ತಿಂಗಳ ಹಿಂದೆ ಹುಟ್ಟು ಹಾಕಿರುವ ಗೌಡ ಸೇನೆಗೆ ಜಿಲ್ಲೆಯಾದ್ಯಂತ ಸದಸ್ಯರನ್ನು ನೋಂದಾಯಿಸಿಕೊಳ್ಳುತ್ತಿದ್ದು, ಜಿಲ್ಲಾ ಮಟ್ಟದ ಸಮಿತಿಯನ್ನು ರಚಿಸುವ ಕಾರ್ಯ ನಡೆಯುತ್ತಿದೆ. ಮುಂದಿನ ವರ್ಷ ಕೆಂಪೇಗೌಡರ ಹುಟ್ಟುಹಬ್ಬವನ್ನು ಜಿಲ್ಲಾ ಮಟ್ಟದಲ್ಲಿ ಅದ್ಧೂರಿಯಾಗಿ ಹಾಗೂ ಅರ್ಥಪೂರ್ಣವಾಗಿ ನಡೆಸಲು ಸೇನೆ ತೀರ್ಮಾನಿಸಿದೆ ಎಂದರು.

ಈ ಸಂದರ್ಭ ಕಿಬ್ಬೆಟ್ಟ ಮಧು, ರುದ್ರಪ್ಪ, ಶರತ್‍ಚಂದ್ರ, ಕುಂದಳ್ಳಿ ಪ್ರಸನ್ನ, ಚೌಡ್ಲು ಪ್ರವೀಣ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.