ಸಿದ್ದಾಪುರ, ಜೂ. 30: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಗೆ ಕರಡಿಗೋಡುವಿನ ಚಿಕ್ಕನಳ್ಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯ ತಡೆಗೋಡೆ ಕುಸಿದಿದ್ದು, ‘ಶಕ್ತಿ’ ಈ ಬಗ್ಗೆ ವರದಿ ಮಾಡಿತ್ತು. ಇದೀಗ ಎಚ್ಚೆತ್ತುಕೊಂಡ ಲೋಕೋಪಯೋಗಿ ಇಲಾಖಾ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ತಡೆಗೋಡೆ ಕುಸಿದಿರುವದರಿಂದ ರಸ್ತೆಯ ಕೆಲ ಭಾಗ ಬಿರುಕು ಬಿಟ್ಟಿದ್ದು, ರಸ್ತೆಯಲ್ಲಿ ವಾಹನ ಸಂಚರಿಸದಂತೆ ಎಚ್ಚರವಹಿಸಲು ಗ್ರಾ.ಪಂ. ಪಿ.ಡಿ.ಓ.ಗೆ ತಿಳಿಸಿದ್ದಾರೆ. ಈ ಸಂದರ್ಭ ಗ್ರಾ.ಪಂ. ಅಧ್ಯಕ್ಷ ಮಣಿ, ಕಂದಾಯ ಪರಿವೀಕ್ಷಕ ಅನಿಲ್ ಕುಮಾರ್, ಗ್ರಾಮ ಲೆಕ್ಕಿಗ ಮಂಜುನಾಥ್, ಸಹಾಯಕ ಕೃಷ್ಣ ಸೇರಿದಂತೆ ಮತ್ತಿತರರು ಹಾಜರಿದ್ದರು.