ಶನಿವಾರಸಂತೆ, ಜೂ. 30: ಶನಿವಾರಸಂತೆಯಲ್ಲಿ ಮಲೇರಿಯಾ ನಿಯಂತ್ರಣ ಮಾಸಾಚರಣೆ ಪ್ರಯುಕ್ತ ಸಮುದಾಯ ಆರೋಗ್ಯ ಕೇಂದ್ರ ಸರಕಾರಿ ಮಾದರಿ ಪ್ರಾಥಮಿಕ ಶಾಲೆ ಹಾಗೂ ಭಾರತಿ ವಿದ್ಯಾಸಂಸ್ಥೆ ಪ್ರೌಢಶಾಲೆ ಸಹಭಾಗಿತ್ವದಲ್ಲಿ ಪಟ್ಟಣದ ಬೀದಿಯಲ್ಲಿ ಜನಜಾಗೃತಿ ಜಾಥಾ ನಡೆಯಿತು. ವಿದ್ಯಾಥಿರ್üಗಳು ಮಲೇರಿಯಾ ನಿಯಂತ್ರಣ ಎಲ್ಲರ ಜವಾಬ್ದಾರಿ, ಮಲೇರಿಯಾದಿಂದ ನೀವು ಮತ್ತು ನಿಮ್ಮ ಕುಟುಂಬ ರಕ್ಷಿಸಿ. ಇತ್ಯಾದಿ ಘೋಷಣಾ ಫಲಕ ಹಿಡಿದು ಪಟ್ಟಣದ ಮುಖ್ಯ ಬೀದಿಗಳಲ್ಲಿ ಘೋಷಣೆ ಕೂಗಿದರು. ಜಾಥಾದಲ್ಲಿ ಶಿಕ್ಷಕರು ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಆಶಾ ಕಾರ್ಯಕರ್ತೆಯರು ಪಾಲ್ಗೊಂಡಿದ್ದರು.