* ಗೋಣಿಕೊಪ್ಪಲು, ಜೂ. 30 : ಇಲ್ಲಿನ ಹಿರಿಯ ವೈದ್ಯ ಡಾ.ಕೆ.ಕೆ.ಶಿವಪ್ಪ ಅವರಿಗೆ 2017ನೇ ಸಾಲಿನ ಡಾ.ಬಿ.ಸಿ.ರಾಯ್ ಪ್ರತಿಷ್ಠಿತ ಪ್ರಶಸ್ತಿ ಲಭಿಸಿದೆ. ಭಾರತೀಯ ವೈದ್ಯಕೀಯ ಸಂಘದ ವತಿಯಿಂದ ಪ್ರತಿವರ್ಷ ನೀಡುವ ಪ್ರತಿಷ್ಠಿತ ಪ್ರಶಸ್ತಿಗೆ ಡಾ.ಶಿವಪ್ಪ ಅವರನ್ನು ಆರಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಘದ ಕರ್ನಾಟಕ ರಾಜ್ಯ ವಿಭಾಗದ ಅಧ್ಯಕ್ಷ ಡಾ.ರಾಜಶೇಖರ ಎಸ್, ಬಳ್ಳಾರಿ ತಿಳಿಸಿದ್ದಾರೆ.

ತಾ. 1 ರಂದು (ಇಂದು) ಬೆಳಿಗ್ಗೆ 11 ಗಂಟೆಗೆ ಬೆಂಗಳೂರು ಮೆಡಿಕಲ್ ಕಾಲೇಜಿನ ಅಲುಮ್ನಿ ಸಭಾಂಗಣದಲ್ಲಿ ನಡೆಯುವ ವೈದ್ಯರ ದಿನಾಚರಣೆ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವದು ಎಂದು ಹೇಳಿದ್ದಾರೆ.