ಮಡಿಕೇರಿ, ಜು. 1: ಜಿಲ್ಲಾ ಕಾರ್ಮಿಕ ಇಲಾಖೆ ಅಧಿಕಾರಿಯಾಗಿ ಎಂ.ಹೆಚ್. ರಾಮಕೃಷ್ಣ ಅವರು ಅಧಿಕಾರ ವಹಿಸಿಕೊಂಡಿದ್ದಾರೆ. ಜಿಲ್ಲಾಡಳಿತ ಭವನದಲ್ಲಿರುವ ತಮ್ಮ ಕಚೇರಿಯಲ್ಲಿ ಪ್ರಬಾರ ಕಾರ್ಮಿಕ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಯತ್ನಟ್ಟಿ ಅವರಿಂದ ಅಧಿಕಾರ ಸ್ವೀಕರಿಸಿದರು.

ಬಳಿಕ ಮಾತನಾಡಿದ ಅವರು, ಕಳೆದ 33 ವರ್ಷಗಳಿಂದ ಕಾರ್ಮಿಕ ಇಲಾಖೆಯಲ್ಲಿ ಕಾರ್ಯ ನಿರ್ವಹಿಸಲಾಗಿದೆ. ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಕಾರ್ಮಿಕ ಇಲಾಖೆ ಜವಾಬ್ದಾರಿ ಹೆಚ್ಚಿನದ್ದಾಗಿದೆ ಎಂದು ಅವರು ಹೇಳಿದರು. ಕಾರ್ಮಿಕ ಇಲಾಖೆಯ ಹಿರಿಯ ನಿರೀಕ್ಷಕ ಯತ್ನಟ್ಟಿ ಮಾತನಾಡಿ, ಕಾರ್ಮಿಕರ ರಕ್ಷಣೆ, ಕಾರ್ಮಿಕರಿಗೆ ಇರುವ ಸರ್ಕಾರದ ಸೌಲಭ್ಯಗಳು, ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಮಾಡುವಲ್ಲಿ ಇಲಾಖೆಯ ಪಾತ್ರ ಮಹತ್ತರವಾಗಿದೆ ಎಂದು ಹೇಳಿದರು.

ಹಿರಿಯ ಕಾರ್ಮಿಕ ನಿರೀಕ್ಷಕಿ ವನಜಾಕ್ಷಿ ಚಾಮರಾಜನಗರ ಜಿಲ್ಲೆಗೆ ವರ್ಗಾವಣೆಗೊಂಡಿದ್ದು, ಅವರಿಗೆ ಇದೇ ಸಂದರ್ಭ ಬೀಳ್ಕೊಡುಗೆ ನೀಡಲಾಯಿತು. ಕಾರ್ಮಿಕ ಇಲಾಖೆಯ ಹಿರಿಯ ನಿರೀಕ್ಷಕ ಮಹದೇವಸ್ವಾಮಿ ಮಾತನಾಡಿದರು. ಇಲಾಖೆಯ ಲಕ್ಷ್ಮೀಶ್, ವಿಜಯ ಕುಮಾರಿ, ಜರೀನಾ, ಕಲ್ಪ, ಪ್ರಸನ್ನ, ಸಿರಾಜ್ ಅಹಮ್ಮದ್ ಇತರರು ಇದ್ದರು.